ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ : ಇಲ್ಲಿನ ಮುಖ್ಯಕಡಲತೀರದಲ್ಲಿ ತಮಿಳುನಾಡು ಮೂಲದ ಪ್ರವಾಸಿಗನೋರ್ವ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ಗೋಕರ್ಣದ ಮುಖ್ಯ ಬೀಚ್ನಲ್ಲಿ ನಡೆದಿದೆ.
ಪ್ರವಾಸಿಗ ಆರ್. ಕುಮಾರ ಎನ್ನುವ ವ್ಯಕ್ತಿ ಗುರುವಾರ ಮಧ್ಯಾಹ್ನ ಗೋಕರ್ಣದ ಮುಖ್ಯ ಕಡಲತೀರದ ಬಳಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕಡಲತೀರದಲ್ಲಿ ಇದ್ದಾಗಲೇ ಆಕಸ್ಮಿಕವಾಗಿ ಕುಸಿದುಬಿದ್ದ ಕುಮಾರ ಅವರಿಗೆ ತಕ್ಷಣ ಸ್ಥಳೀಯರು ಸಹಾಯಕ್ಕೆ ಧಾವಿಸಿ ಪ್ರಾಥಮಿಕ ಚಿಕಿತ್ಸೆ ನೀಡಲು ಪ್ರಯತ್ನಿಸಿದ್ದಾರೆ.
ಬಳಿಕ ಸ್ಥಳೀಯರ ಸಹಕಾರದಿಂದ ಅವರನ್ನು ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಅಲ್ಲಿ ವೈದ್ಯರು ಪರಿಶೀಲನೆ ನಡೆಸಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಮೃತನ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯ ಮಾಹಿತಿ ಪಡೆದ ಗೋಕರ್ಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತನ ಕುಟುಂಬದವರಿಗೆ ವಿಷಯ ತಿಳಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ/ಸಚಿವ ಮಂಕಾಳ್ ವೈದ್ಯ ಅವರ ಸೂಚನೆ ಬೆನ್ನಲ್ಲೇ ಕುಮಟಾ–ಶಿರಸಿ ಹೆದ್ದಾರಿಯಲ್ಲಿ ಬಸ್ ಸಂಚಾರ ಆರಂಭ


