ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ :ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ಅಕ್ರಮ ಸಂಬಂಧದ ಇದೆ ಎಂಬ ಶಂಕೆ ವ್ಯಕ್ತವಾಗಿದ್ದು, ವಿವಾಹಿತ ವಿಚ್ಚೇದಿತ ಮಹಿಳೆಯ ಕುತ್ತಿಗೆಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದ ಮಹಿಳೆಯನ್ನು ರಂಜಿತಾ (31) ಎಂದು ಗುರುತಿಸಲಾಗಿದೆ. ಆರೋಪಿತ ವ್ಯಕ್ತಿ ರಫಿಕ್ ಎಂಬಾತನಾಗಿದ್ದು, ಕೊಲೆ ಬಳಿಕ ಆತ ಪರಾರಿಯಾಗಿದ್ದಾನೆ. ರಂಜಿತಾ ಮದುವೆಯಾಗಿ ಕೆಲ ವರ್ಷಗಳಿಂದ ಗಂಡನಿಂದ ದೂರವಿದ್ದು, ಯಲ್ಲಾಪುರ ಮೂಲದ ರಫಿಕ್ ಕಳೆದ ಹತ್ತಾರು ವರ್ಷಗಳಿಂದ ಮಹಿಳೆಯ ಮನೆಗೆ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಇಬ್ಬರ ನಡುವೆ ಆಗಾಗ ವಿವಾದಗಳು ನಡೆಯುತ್ತಿದ್ದವು ಎಂಬ ಶಂಕೆ ವ್ಯಕ್ತವಾಗಿದೆ. ಆತ ಕೊಲೆಯಾದ ಮಹಿಳೆಯ ಮನೆಗೆ ರಫೀಕ್ ಮೊದಲಿನಿಂದಲ್ಲೂ ಬಂದು ಹೋಗುತ್ತಿದ್ದ ಎನ್ನಲಾಗಿದೆ..
ಘಟನೆಯ ದಿನ ಕಾಳಮ್ಮನಗರದಲ್ಲಿರುವ ವಾಸಸ್ಥಳದಲ್ಲಿ ರಂಜಿತಾ ಮತ್ತು ರಫಿಕ್ ನಡುವೆ ಮಾತಿನ ಚಕಮಕಿ ನಡೆದಿದ್ದು, ಆ ಸಂದರ್ಭದಲ್ಲಿ ರಫಿಕ್ ಕುತ್ತಿಗೆಗೆ ಚಾಕು ಇರಿದು ರಂಜಿತಾಳನ್ನು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.ತೀವ್ರ ರಕ್ತಸ್ರಾವದಿಂದ ರಂಜಿತಾ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ..
ಘಟನೆಯ ಮಾಹಿತಿ ತಿಳಿದ ತಕ್ಷಣ ಯಲ್ಲಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೊಲೆ ಮಾಡಿ ಪರಾರಿಯಾಗಿರುವ ರಫಿಕ್ನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


