ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ನಗರಸಭೆಗೆ ಸೇರಿದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ತಡ ರಾತ್ರಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಇದನ್ನೂ ಓದಿ: ಅಂಕೋಲಾದಲ್ಲಿ ಮಟ್ಕಾ ದಂಧೆ ನಿಲ್ಲಿಸುವಲ್ಲಿ ಪೊಲೀಸರು ವಿಫಲ
ರಾತ್ರಿ ವೇಳೆ ತ್ಯಾಜ್ಯ ವಿಲೇವಾರಿ ಘಟಕದ ಪ್ಲಾಸ್ಟಿಕ್ ಸಂಗ್ರಹ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದೆ. ವಿಷಯ ತಿಳಿದ ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು.
ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಹೆಚ್ಚುವರಿ ಸಹಾಯಕ್ಕಾಗಿ ಅಂಕೋಲಾ ಹಾಗೂ ಗ್ರಾಸಿಂ ಇಂಡಸ್ಟ್ರೀಗೆ ಸೇರಿದ ಅಗ್ನಿಶಾಮಕ ವಾಹನಗಳನ್ನು ಕೂಡ ಕರೆಸಿಕೊಳ್ಳಲಾಗಿತ್ತು. ಹಲವು ಗಂಟೆಗಳ ನಿರಂತರ ಪ್ರಯತ್ನದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಯಿತು.
ಘಟನೆಯ ಮಾಹಿತಿ ಪಡೆದ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ತ್ಯಾಜ್ಯ ವಿಲೇವಾರಿ ಘಟಕದ ಸುತ್ತಮುತ್ತ ಜನವಸತಿ ಪ್ರದೇಶ ಇರುವ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಯಿತು.
ಈ ಕುರಿತು ಮಾಹಿತಿ ನೀಡಿದ ಕಾರವಾರ ನಗರಸಭೆ ಆಯುಕ್ತ ಜಗದೀಶ್ ಹುಲಗಜ್ಜಿ ಅವರು, “ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಉಂಟಾದ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ” ಘಟನೆಯಿಂದಾಗಿ ತ್ಯಾಜ್ಯ ವಿಲೇವಾರಿ ಘಟಕದ ಪ್ಲಾಸ್ಟಿಕ್ ಸಂಗ್ರಹ ಭಾಗಕ್ಕೆ ಹಾನಿಯಾಗಿದೆ ಎಂದು ತಿಳಿಸಿದ್ದಾರೆ…
ಇದನ್ನ ಓದಿ/ರಾಸಲೀಲೆ ವಿಡಿಯೋ ಬಯಲಾಗುವ ಭೀತಿ : ಮಗಳನ್ನೇ ಮುಗಿಸಲು ಸುಚಿತ್ರಾ ಗ್ಯಾಂಗ್ ಸಂಚು ರೂಪಿಸಿತ್ತಾ?




