Suddibindu News /ಶಿವಮೊಗ್ಗ: ಮದ್ಯಪಾನದ ಮತ್ತಿನಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ದುರ್ಘಟನೆ Shivamogga ಜಿಲ್ಲೆಯ ಗಾಜನೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸೊಸೈಟಿ ಬಳಿ ನಿನ್ನೆ ರಾತ್ರಿ ನಡೆದ ಗಲಾಟೆಯಲ್ಲಿ ಶ್ರೀನಿವಾಸ (36) ಎಂಬಾತ ಕೊಲೆಯಾಗಿದ್ದಾನೆ. ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಶ್ರೀನಿವಾಸ ಪ್ರತಿದಿನ ಮದ್ಯಪಾನ ಮಾಡಿ ಕಿರಿಕ್ ಮಾಡುತ್ತಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿ ಸಹ ಸ್ನೇಹಿತರೊಂದಿಗೆ ಮದ್ಯಪಾನ ಮಾಡಿದ ಬಳಿಕ ಮಾತಿನ ಚಕಮಕಿ ಜಗಳಕ್ಕೆ ತಿರುಗಿದೆ. ಜಗಳ ತೀವ್ರಗೊಂಡ ವೇಳೆ ಆರೋಪಿಗಳು ಕಲ್ಲು ಎತ್ತಿ ಹೊಡೆದು, ನಂತರ ಹರಿತವಾದ ಬ್ಲೇಡ್ನಿಂದ ಇರಿದು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಘಟನೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಕುರಿತು Tunganagar Police Station ನಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ.




