ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ: ಉತ್ತರಕನ್ನಡ ಜಿಲ್ಲೆಯ ಗೋಕರ್ಣ ಮಹಾಬಲೇಶ್ವರ ಕ್ಷೇತ್ರದಲ್ಲಿ ಶಿವರಾತ್ರಿ ಹಿನ್ನೆಲೆ ದೇವರ ದರ್ಶನಕ್ಕೆ ಆಗಮಿಸಿದ್ದ ಹಿರಿಯ ಭಕ್ತನೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ನಾರ್ತ್ ಗೋವಾ ನಿವಾಸಿ ರತ್ನಾಕರ (76) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಶಿವರಾತ್ರಿ ಪ್ರಯುಕ್ತ ನಾರ್ತ್ ಗೋವಾದಿಂದ ಗೋಕರ್ಣದ ಮಹಾಬಲೇಶ್ವರ ದೇವಾಲಯಕ್ಕೆ ಆಗಮಿಸಿದ್ದು, ಆತ್ಮಲಿಂಗದ ದರ್ಶನ ಪಡೆದು ಕ್ಷೇತ್ರದಿಂದ ಹೊರಬಂದ ತಕ್ಷಣವೇ ಅವರಿಗೆ ಹೃದಯಾಘಾತವಾಗಿದೆ.

ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಮ್ಮ ವಾಹನದಲ್ಲಿ ಸಾಗಿಸಿ ಗೋಕರ್ಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ
ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಶಿವರಾತ್ರಿ ದಿನವೇ ಪುರಾಣ ಪ್ರಸಿದ್ಧ ಮಹಾಬಲೇಶ್ವರ ಕ್ಷೇತ್ರದಲ್ಲಿ ದರ್ಶನ ಪಡೆದ ಬಳಿಕ ಸಾವನ್ನಪ್ಪಿರುವುದರಿಂದ, “ಅವರಿಗೆ ಮುಕ್ತಿ ದೊರಕಿದೆ” ಎಂಬ ನಂಬಿಕೆ ಸ್ಥಳೀಯರಲ್ಲಿ ವ್ಯಕ್ತವಾಗಿದೆ.

Murudeshwar/ಮುರುಡೇಶ್ವರದಲ್ಲಿ ಸಂಭ್ರಮದ ಶಿವರಾತ್ರಿ ಉತ್ಸವ – ಲಕ್ಷಾಂತರ ಭಕ್ತರ ಸಮಾಗಮ