ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ಸಮುದ್ರ ತೀರದಲ್ಲಿ ಶಿವರಾತ್ರಿ ಅಮವಾಸ್ಯೆ ಪ್ರಯುಕ್ತ ನಡೆಯುತ್ತಿದ್ದ ಸಮುದ್ರ ಸ್ನಾನ ವೇಳೆ ಯುವಕನೊಬ್ಬ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ.

ಮೃತ ಯುವಕನನ್ನು ಯಶ್ ಶ್ಯಾಮ ಮಹಾಲೆ (18) ಎಂದು ಗುರುತಿಸಲಾಗಿದೆ. ಪ್ರತಿವರ್ಷ ಶಿವರಾತ್ರಿ ಅಮವಾಸ್ಯೆ ದಿನ ಭಕ್ತರು ಹಾಗೂ ಸ್ಥಳೀಯರು ಸಮುದ್ರ ಸ್ನಾನಕ್ಕೆ ಆಗಮಿಸುವ ಪದ್ಧತಿಯಂತೆ ಈ ವರ್ಷವೂ ಸಾಕಷ್ಟು ಮಂದಿ ಮಾಜಾಳಿ ಸಮುದ್ರ ತೀರಕ್ಕೆ ಆಗಮಿಸಿದ್ದರು.

ಸಮುದ್ರ ಸ್ನಾನಕ್ಕೆ ಇಳಿದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಯಶ್ ನೀರಿನಲ್ಲಿ ಮುಳುಗಿದ್ದಾನೆ. ತಕ್ಣಣ ಸ್ಥಳೀಯರು ಮತ್ತು ಸ್ನೇಹಿತರು ರಕ್ಷಿಸಲು ಯತ್ನಿಸಿದರೂ ಫಲಕಾರಿಯಾಗಲಿಲ್ಲ. ನಂತರ ಸಮುದ್ರದಿಂದ ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ಯುವಕ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಘಟನೆಯ ಕುರಿತು ಚಿತ್ತಾಕುಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ/Heatwave-Alert/ಉತ್ತರ ಕನ್ನಡದಲ್ಲಿ ಬಿಸಿಲಿನ ಎಚ್ಚರಿಕೆ: 38.9° ತಲುಪುವ ಸಾಧ್ಯತೆ : ಡಿಸಿ ಕೆ ಲಕ್ಷ್ಮೀ ಪ್ರೀಯಾ