ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡರೂ ಸಹ ನಿವೇದಿತಾ ಆಳ್ವ ಅವರು ಮಾತ್ರ ಚುನಾವಣೆಯ ಬಳಿಕವೂ ಕುಮಟಾ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯತ್ತ ಹೆಚ್ಚಿನ ಗಮನ ಹರಿಸುತ್ತಿದ್ದಾರೆ.
ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮೂಲಸೌಕರ್ಯ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ತನ್ನ ಕ್ಷೇತ್ರದಲ್ಲಿನ, ರಸ್ತೆ, ಕುಡಿಯುವ ನೀರು, ಚರಂಡಿ ವ್ಯವಸ್ಥೆ ಹಾಗೂ ಶಾಲಾ ಸೌಲಭ್ಯಗಳ ಸುಧಾರಣೆಗೆ ಸಂಬಂಧಪಟ್ಟ ಸಚಿವರುಗಳಿಗೆ ಮನವಿ ಸಲ್ಲಿ ಅನುದಾನ ತರುವಲ್ಲಿ ಯಶಸ್ವಿ ಕಾಣುತ್ತಿದ್ದಾರೆ..ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯವಿರುವ ಅನುದಾನವನ್ನು ಸರ್ಕಾರದ ವಿವಿಧ ಇಲಾಖೆಗಳಿಂದ ತರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದು, ಕೆಲವು ಪ್ರದೇಶಗಳಲ್ಲಿ ಕಾಮಗಾರಿಗಳು ಆರಂಭವಾಗಿವೆ.
ಚುನಾವಣೆಯಲ್ಲಿ ಪರಾಭವಗೊಂಡರೂ ಕ್ಷೇತ್ರದ ಜನರ ಹಿತವನ್ನು ಮುಂದಿಟ್ಟು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ನಿವೇದಿತಾ ಆಳ್ವ ಅವರ ನಡೆಗೆ ಕ್ಷೇತ್ರದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. “ಚುನಾವಣೆ ಸೋಲಾದರೆ ಸೇವೆ ಮುಗಿದಂತಲ್ಲ. ಕ್ಷೇತ್ರದ ಜನರ ವಿಶ್ವಾಸವೇ ನನ್ನ ಶಕ್ತಿ. ಅಧಿಕಾರ ಇಲ್ಲದಿದ್ದರೂ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯ” ಎಂಬ ಧೋರಣೆಯೊಂದಿಗೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ಇವರಿಂದ ಇನ್ನಷ್ಟು ಕಾರ್ಯವಾಗುವಂತಾಗಬೇಕಿದೆ..
ಇದನ್ನೂ ಓದಿ/ಕುಮಟಾದಲ್ಲಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 24 ಗಂಟೆಯೊಳಗೆ ಆರೋಪಿಯ ಬಂಧನ


