ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ :ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಕ್ರಿಮ್ಸ್‌ನ ನೂತನ 450 ಹಾಸಿಗೆಯ ಹೈಟೆಕ್ ಆಸ್ಪತ್ರೆ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಿದರು.

ಸೂಪರ್ ಸ್ಪೆಷಾಲಿಟಿ ಮಾದರಿಯಲ್ಲಿ ನಿರ್ಮಾಣಗೊಂಡಿರುವ ಈ ಬೃಹತ್ ಆಸ್ಪತ್ರೆ ಕಟ್ಟಡವು ಉತ್ತರ ಕನ್ನಡ ಜಿಲ್ಲೆಯ ಜನರಿಗೆ ಅತ್ಯಾಧುನಿಕ ಆರೋಗ್ಯ ಸೇವೆ ಒದಗಿಸುವ ಮಹತ್ವದ ಹೆಜ್ಜೆಯಾಗಿದೆ. ಮುಂದಿನ ದಿನಗಳಲ್ಲಿ ಇಲ್ಲಿ ಸೂಪರ್ ಸ್ಪೆಷಾಲಿಟಿ ಆರೋಗ್ಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ ಪಾಟೀಲ್, ಮಂಕಾಳ ವೈದ್ಯ, ಕಾರವಾರ ಶಾಸಕ ಸತೀಶ ಸೈಲ್, ಶಿರಸಿ ಶಾಸಕ ಭೀಮಣ್ಣ ನಾಯ್ಕ ಸೇರಿದಂತೆ ಜಿಲ್ಲೆಯ ಹಲವು ಶಾಸಕರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು. ಕ್ರಿಮ್ಸ್ ಆಸ್ಪತ್ರೆ ಕಟ್ಟಡ ಉದ್ಘಾಟನೆಯಿಂದ ಕರಾವಳಿ ಭಾಗದ ಜನರಿಗೆ ಉನ್ನತ ಮಟ್ಟದ ಚಿಕಿತ್ಸೆ ಸ್ಥಳದಲ್ಲೇ ದೊರಕುವಂತಾಗಿದ್ದು, ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ  ತೆರಳಬೇಕಾದ ಅವಶ್ಯಕತೆ ಕಡಿಮೆಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಇದನ್ನೂ ಓದಿ/ಜೂನ್ ಒಳಗೆ ಜಿಲ್ಲಾ–ತಾಲ್ಲೂಕು ಪಂಚಾಯಿತಿ ಚುನಾವಣೆ: ಕಾರವಾರದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ