ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : “ಗ್ಯಾರಂಟಿ ಯೋಜನೆಗಳ ಕಾರಣ ಸರ್ಕಾರದ ಬಳಿ ದುಡ್ಡಿಲ್ಲ ಎಂಬ ತಪ್ಪು ಸಂದೇಶ ನೀಡಲಾಗುತ್ತಿದೆ. ಆದರೆ ನಾವು ಅಭಿವೃದ್ದಿ ಕೆಲಸಗಳನ್ನೂ ಮಾಡುತ್ತಿದ್ದೇವೆ, ಜೊತೆಗೆ ಗ್ಯಾರಂಟಿ ಯೋಜನೆಗಳನ್ನೂ ಯಶಸ್ವಿಯಾಗಿ ಜಾರಿಗೊಳಿಸುತ್ತಿದ್ದೇವೆ” ಎಂದು ಸಿಎಂ ಸಿದ್ದರಾಮಯ್ಯ ಅವರು ಕಾರವಾರದಲ್ಲಿ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟಿಸಿ ಮಾತನಾಡಿದರು,
ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಗಳಿಗಾಗಿ ಈಗಾಗಲೇ ₹2,954 ಕೋಟಿ ರೂ. ಹಣ ನೀಡಲಾಗಿದೆ. ಇಲ್ಲಿವರೆಗೆ ರಾಜ್ಯದಲ್ಲಿ ಒಟ್ಟು ₹1 ಲಕ್ಷ 18 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.ಹಿಂದಿನ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಏನು ಮಾಡಲಿಲ್ಲ ಎಂದು ಟೀಕಿಸಿದ ಸಿಎಂ, “ನಾವು ಮಾಡಿದ ಕೆಲಸಗಳ ಬಗ್ಗೆ ಜನರಿಗೆ ತಪ್ಪು ಸಂದೇಶ ನೀಡಲಾಗುತ್ತಿದೆ” ಎಂದು ಹೇಳಿದರು.
ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಯಾದರೆ ಹುಬ್ಬಳ್ಳಿ ಹಾಗೂ ಮಂಗಳೂರು ಕಡೆ ಚಿಕಿತ್ಸೆಗಾಗಿ ಹೋಗುವ ಅವಶ್ಯಕತೆ ತಪ್ಪುತ್ತದೆ ಎಂದು ತಿಳಿಸಿದರು.
ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಬೇಡಿಕೆಗೆ ಸೈಲ್ ಇಟ್ಟಿದ್ದು, ಮುಂದಿನ ಬಜೆಟ್ನಲ್ಲಿ ಇದಕ್ಕೆ ಅನುಮೋದನೆ ನೀಡುವುದಾಗಿ ಭರವಸೆ ನೀಡಿದರು ಆರೋಗ್ಯ ಸಚಿವ ಶರಣ ಪ್ರಕಾಶ ಪಾಟೀಲ್ ಜೊತೆ ಕೂಡ ಮಾತ್ನಾಡಿದ್ದೇನೆ, ಪ್ರತಿಯೊಂದು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇರಬೇಕು ಎಂಬ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದರು.
ಮುಖ್ಯ ಅಂಶಗಳು:
*ಪ್ರತಿಯೊಂದು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಸರ್ಕಾರ ನಿರ್ಧಾರ.
*ಎಲ್ಲಾ ಜಿಲ್ಲೆಗಳಲ್ಲೂ ಕ್ಯಾನ್ಸರ್ ಯುನಿಟ್ ಸ್ಥಾಪನೆಗೆ ಸೂಚನೆ
*ಶ್ರೀಮಂತರಿಗೆ ಖಾಸಗಿ ಆಸ್ಪತ್ರೆಗಳ ಆಯ್ಕೆ ಇದ್ದರೂ, ಬಡವರು ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿಕೊಂಡಿದ್ದಾರೆ
ಬಡ ಮತ್ತು ಸಾಮಾನ್ಯ ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಗುರಿ
ಇದನ್ನೂ ಓದಿ/ಕುಮಟಾ ಶಾಸಕ ದಿನಕರ ಶೆಟ್ಟಿಗೆ ಕಾಂಗ್ರೆಸ್ ಬಾಗಿಲು ತೆರೆದಿಲ್ಲ ಎಂದ ಸಿಎಂ ಸಿದ್ದರಾಮಯ್ಯ





