ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ : ತಾಲೂಕಿನ ಅಂಬಿಕಾನಗರ,ಬೊಮ್ಮನಹಳ್ಳಿ ಮಾರ್ಗದಲ್ಲಿ ಕಾಡಾನೆೊಂದು ರಸ್ತೆ ಮಧ್ಯೆ ನಿಂತು ವಾಹನಗಳನ್ನು ತಡೆದಿದ್ದು, ಇದರಿಂದಾಗಿ ಬಸ್ನಲ್ಲಿದ್ದ ಪ್ರಯಾಣಿಕರು ಕೆಲ ಸಮಯ ಭಯಭೀತರಾದ ಘಟನೆ ನಡೆದಿದೆ.
ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ಸುಗಳನ್ನು, ಆನೆ ರಸ್ತೆ ಮಧ್ಯದಲ್ಲಿ ಕೆಲಕಾಲ ತಡೆದು ನಂತರ ದಾರಿ ಬಿಡುತ್ತಿರುವ ದೃಶ್ಯಗಳು ಸ್ಥಳೀಯರು ಹಾಗೂ ಪ್ರಯಾಣಿಕರಲ್ಲಿ ಆಶ್ಚರ್ಯ ಮೂಡಿಸಿವೆ ಸುಮಾರು 10 ನಿಮಿಷಗಳ ಕಾಲ ರಸ್ತೆ ಮಧ್ಯದಲ್ಲೇ ಎರಡು ಬಸ್ಗಳನ್ನ ನಿಲ್ಲಿಸಿದ ಬಳಿಕ ಆನೆ ಸ್ವಯಂಪ್ರೇರಿತವಾಗಿ ಅರಣ್ಯ ಪ್ರದೇಶದತ್ತ ತೆರಳಿದೆ.
ಘಟನೆಯ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್ಗಳಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಾಡಾನೆ ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿದ್ದು, ವಾಹನ ಸಂಚಾರಕ್ಕೆ ಕೆಲಕಾಲ ಅಡ್ಡಿಯಾಗುತ್ತಿದೆ. ಪರಿಣಾಮ ಚಾಲಕರು ಹಾಗೂ ಪ್ರಯಾಣಿಕರು ಭಯದಲ್ಲೆ ಈ ಮಾರ್ಗದಲ್ಲಿ ಸಂಚರಿಸಬೇಕಿದೆ.
ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಈ ಮಾರ್ಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ವಾಹನ ಸವಾರರು ರಾತ್ರಿ ಹಾಗೂ ಬೆಳಗಿನ ಸಮಯದಲ್ಲಿ ವಿಶೇಷ ಜಾಗರೂಕತೆ ವಹಿಸಬೇಕಿದೆ..
ವಿಡಿಯೋಗೆ ನೆಟ್ಟಿಗರು “ಆನೆ ಚೆಕ್ ಪೋಸ್ಟ್” ಎಂದು ಹಾಸ್ಯಭರಿತವಾಗಿ ಪ್ರತಿಕ್ರಿಯಿಸುತ್ತಿದ್ದು, ಕೆಲವರು “ಕಾಡಿನ ನಿಯಮ ಪಾಲಿಸದೇ ಹೋದರೆ ಹೀಗೆ ತಪಾಸಣೆ!” ಎಂದು ಚುಟುಕಿನ ಕಾಮೆಂಟ್ಗಳನ್ನು ಮಾಡುತ್ತಿದ್ದಾರೆ.



