ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಯುಗಾದಿ ಹಬ್ಬದ ಪ್ರಯುಕ್ತವಾಗಿ ಮಾರ್ಚ್ 19ರಂದು ಎರಡನೇ ವರ್ಷದ ಹೊನಲು ಬೆಳಕಿನ ಸುಲಗಾಯಿ ಪಂದ್ಯಾವಳಿಯನ್ನ ಬರ್ಗಿಆಟೋ ನಿಲ್ದಾಣ ಬಳಿ ಆಯೋಜನೆ ಮಾಡಲಾಗಿದ್ದು, ಪಂದ್ಯಾವಳಿಯಲ್ಲಿ ಭಾಗವಹಿಸುವವರಿಗೆ ಆಕರ್ಷಕ ನಗದು ಬಹುಮಾನಗಳನ್ನು ನೀಡಲಾಗುವುದು
ಪ್ರಥಮ ಬಹುಮಾನ ರೂ.5,000, ದ್ವಿತೀಯ ಬಹುಮಾ ರೂ.3,000, ತೃತೀಯ ಬಹುಮಾನ ರೂ.2,000 ಹಾಗೂ ನಾಲ್ಕನೇ ಬಹುಮಾನ ರೂ.1,000 ನಿಗದಿಪಡಿಸಲಾಗಿದೆ. ಯುಗಾದಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ಉತ್ಸಾಹದಿಂದ ಆಚರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಪಂದ್ಯಾವಳಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ರಾಜೇಶ್ ನಾಯ್ಕ್ (6363443938), ಸತೀಶ್ ಪಟಗಾರ (9591523045), ಶೇಷ ಪಟಗಾರ (9980548702) ಹಾಗೂ ಮಂಜುನಾಥ ನಾಯ್ಕ್ (9900285419) ಅವರನ್ನು ಸಂಪರ್ಕಿಸಬಹುದಾಗಿದೆ.
ಯುಗಾದಿ ಹಬ್ಬದ ಪ್ರಯುಕ್ತ ಆಯೋಜಿಸಿರುವ ಈ ಪಂದ್ಯಾವಳಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಂದ್ಯಾವಳಿಯನ್ನ ಯಶಸ್ವಿಗೊಳಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.



