ಸುದ್ದಿಬಿಂದು ಬ್ಯೂರೋ ವರದಿ
ಬೆಳಗಾವಿ :ಮೊದಲ ಬಾರಿಗೆ ಹೆಣ್ಣು ಮಗು ಜನಿಸಿದೆ ಎಂಬ ಕಾರಣಕ್ಕೆ 15 ದಿನಗಳ ಹಿಂದಷ್ಟೇ ಜನಿಸಿದ್ದ ಹೆಣ್ಣುಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಉಕ್ಕಡ ಗ್ರಾಮದಲ್ಲಿ ಬೆಳಕಿಗೆ ಬಂದಿದ್ದು.ಮಗು ಸಾವಿನ ಹಿಂದೆ ತಂದೆಯ ಕೈವಾಡ ಇದೆ ಆರೋಪಿಸಲಾಗಿದ್ದು, ತಂದೆಯೇ ಮಗುವಿಗೆ ವಿಷಪ್ರಾಶನ ಮಾಡಿರುವ ಬಗ್ಗೆ ಆರೋಪ ಕೇಳಿ ಬಂದಿದೆ.
ಹೆರಿಗೆ ಹಿನ್ನೆಲೆಯಲ್ಲಿ ತಾಯಿ ಶೀಲಾ ತವರು ಮನೆಯಲ್ಲಿ ಇದ್ದರು. ಮಾರ್ಚ್ 17ರಂದು ಮಧ್ಯಾಹ್ನ ಪತ್ನಿ ಹಾಗೂ ಮಗುವನ್ನು ನೋಡಲು ಬಂದ ಮಗುವಿನ ತಂದೆ ಭೀಮರಾಯ. ಕೆಲ ಸಮಯ ಕುಟುಂಬದೊಂದಿದೆ ಕಾಲ ಕಳೆದು ಬಳಿಕ ತನ್ನ ಊರಿಗೆ ವಾಪಸ್ ಆಗಿದ್ದಾನೆ. ಆದರೆ ಆತ ಹೋದ ಕೆಲವೇ ಸಮಯದಲ್ಲಿ ಮಗು ಏಕಾಏಕಿ ಸಾವನ್ನಪ್ಪಿರುವುದು ಕುಟುಂಬದವರಲ್ಲಿ ಆತಂಕ ಮೂಡಿಸಿದೆ.
ಮಗು ಪೂರ್ವದಲ್ಲೇ ಆರೋಗ್ಯವಾಗಿದ್ದರೂ ದಿಢೀರ್ ಸಾವಿಗೆ ಕಾರಣ ಏನು ಎಂಬ ಅನುಮಾನ ವ್ಯಕ್ತವಾಗಿದ್ದು, ತಂದೆಯ ವರ್ತನೆ ಮೇಲೆಯೇ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಭೀಮರಾಯ ಯಾವುದೋ ಮಾತ್ರೆ ತರಿಸಿ ಮಗುವಿಗೆ ನೀಡಿದ್ದಾನೆ ಎಂಬ ಆರೋಪವನ್ನು ಪತ್ನಿ ಹಾಗೂ ಆಕೆಯ ಸಂಬಂಧಿಕರು ಮಾಡಿದ್ದಾರೆ.
ಘಟನೆಯ ನಂತರ ಭೀಮರಾಯ ನಾಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮೃತ ಮಗುವಿನ ಶವವನ್ನು ಬಿಮ್ಸ್ ಆಸ್ಪತ್ರೆ ಎದುರು ಇಟ್ಟು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರಿಸ್ಥಿತಿ ತೀವ್ರವಾಗುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ನಾರಾಯಣ್ ಬರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಆರೋಪಿ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾ ಮುಂದುವರೆಸಿದ್ದಾರೆ..
ಇದನ್ನೂ ಓದಿ/ರಾಫ್ಟಿಂಗ್ ದರ ಹೆಚ್ಚಳಕ್ಕೆ ವಿರೋಧ: ಗಣೇಶಗುಡಿಯಲ್ಲಿ ಜಟ್ಟಿದಾರರು–ಮಾಲೀಕರ ನಡುವೆ ಸಂಘರ್ಷ

