ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ: ಗ್ರಹಬಳಕೆ (ಡೊಮೆಸ್ಟಿಕ್) ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ದುರುಪಯೋಗ ಮಾಡುತ್ತಿರುವ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಂಡೇಲಿ ನಗರದಲ್ಲ ದಾಳಿ ನಡೆಸಿ 5 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ವಿವಿಧ ಭಾಗಗಳಲ್ಲಿ ಸಂಜೆ ದಂಡಾಧಿಕಾರಿ ಹಾಗೂ ಆಹಾರ ನಿರೀಕ್ಷಕರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಯಿತು. ನಗರದ ಹೋಟೆಲ್‌ಗಳು, ಟೀ ಅಂಗಡಿಗಳು ಮತ್ತು ಎಗ್ ರೈಸ್ ಅಂಗಡಿಗಳ ಮೇಲೆ ದಾಳಿ ನಡೆಸಲಾಯಿತು.

ಪರಿಶೀಲನೆ ವೇಳೆ ಕಮರ್ಷಿಯಲ್ ಬಳಕೆಗೆ ಮೀಸಲಾದ ಸ್ಥಳಗಳಲ್ಲಿ ಗ್ರಹಬಳಕೆ ಸಿಲಿಂಡರ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದ್ದು,ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಒಟ್ಟು 5 ಸಿಲಿಂಡರ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ತಹಶೀಲ್ದಾರ ಶೈಲೇಶ್ ಪ್ರಮಾಣಂದ್ ಮಾತನಾಡಿ, ನಗರದಲ್ಲಿ ಇಂತಹ ದಾಳಿಗಳನ್ನು ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.ಆಹಾರ ನಿರೀಕ್ಷಕ ಗೋಪಿ ಚೌಹಾನ್ ಹೋಟೆಲ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಕಮರ್ಷಿಯಲ್ ಸಿಲಿಂಡರ್ ಕೊರತೆ ತಾತ್ಕಾಲಿಕವಾಗಿದ್ದು, ಯಾವುದೇ ಕಾರಣಕ್ಕೂ ಗ್ರಹಬಳಕೆ ಸಿಲಿಂಡರ್ ಬಳಸಬಾರದು ಎಂದು ತಿಳಿಸಿದ್ದಾರೆ.ಇಂತಹ ದುರುಪಯೋಗದಿಂದ ಸಾರ್ವಜನಿಕರಿಗೆ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಆಹಾರ ನಿರೀಕ್ಷಕ ಗೋಪಿ ಚೌಹಾನ್ ಹಾಗೂ ದಯಾನಂದ್ ಉಪಸ್ಥಿತರಿದ್ದರು.

ಇದನ್ನೂ ಓದಿ/ನಶೆ ಇಳಿಸಿದ ಖಾಕಿ ಪಡೆ: ಗಾಂಜಾ ಸಹಿತ ವ್ಯಕ್ತಿಯ ಸೆರೆ