ಸುದ್ದಿಬಿಂದು ಬ್ಯೂರೋ ವರದಿ
ಯುಗಾದಿ ಹಬ್ಬದ ಸಂಭ್ರಮದ ನಡುವೆಯೇ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಆಸ್ತಿ ವಿವಾದದ ಹಿನ್ನೆಲೆ ಅಣ್ಣನೇ ತಂಗಿಯನ್ನು ಕೊಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ.
ಶಿವಲೀಲಾ ಸಂಗೊಳ್ಳಿ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಆಕೆಯ ಸಹೋದರ ಹಣಮಂತ ಯಲಿವಾಳ ಮೇಲೆ ಕೊಲೆ ಮಾಡಿದ ವ್ಯಕ್ತಿಯಾಗಿದ್ದಾನೆ. ಕುಟುಂಬದ ಆರು ಎಕರೆ ಜಮೀನಿನ ಹಂಚಿಕೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ಅಣ್ಣ-ತಂಗಿ ನಡುವೆ ವಾಗ್ವಾದ ನಡೆಯುತ್ತಿತ್ತು ಎನ್ನಲಾಗಿದೆ..
ಯುಗಾದಿ ಹಬ್ಬದಂದು ಭೂಮಿ ಪೂಜೆಗಾಗಿ ಇಬ್ಬರೂ ಹೊಲಕ್ಕೆ ತೆರಳಿದ್ದ ವೇಳೆ, ತಮಗೆ ಸಲ್ಲುವ ಪಾಲಿನ ಜಾಗದಲ್ಲೇ ಪೂಜೆ ನಡೆಸುವುದಾಗಿ ಶಿವಲೀಲಾ ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ಕೋಪಗೊಂಡ ಹಣಮಂತ, ತಂಗಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಶಿವಲೀಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ಮಾಹಿತಿ ತಿಳಿದ ಧಾರವಾಡ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಬ್ಬದ ದಿನವೇ ನಡೆದ ಈ ದುರ್ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದು, ಕುಟುಂಬದ ಆಸ್ತಿ ವಿವಾದವೇ ಈ ಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ/ಹಸುಗೂಸಿಗೆ ವಿಷ ಹಾಕಿದ್ದ ತಂದೆ.? ಮಗು ಸತ್ತ ಕೆಲವೇ ಹೊತ್ತಲ್ಲಿ ನಾಪತ್ತೆಯಾದ ತಂದೆ

