ಸುದ್ದಿಬಿಂದು ಬ್ಯೂರೋ ವರದಿ
Ankola| /ಕಾರವಾರ /ಕಾಂಗ್ರೆಸ್ ಮುಖಂಡ ಹಾಗೂ ಗೃಹ ಸಚಿವರ ಆಪ್ತರಾಗಿದ್ದ ಗೋಪಾಲಕೃಷ್ಣ ನಾಯಕ ಕೊಲೆ ಯತ್ನಿಸಿದ   ನಾಲ್ವರು ಶಂಕಿತ ಆರೋಪಿಗಳನ್ನು ಮಾಜಾಳಿ ಚೆಕ್ ಪೊಸ್ಟ್ ಬಳಿ ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಗೋವಾ ನೋಂದಣಿ‌ ಹೊಂದಿರುವ ಕಾರಿನಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಅವರಿಗೆ ತಲೆ ಹಾಗೂ ಕುತ್ತಿಗೆಗೆ ಚಾಕುವಿನಿಂದ ಇರಿದ ಘಟನೆ  ಅಂಕೋಲಾದ ಕಣಕಣೇಶ್ವರ ದೇವಸ್ಥಾನದ ಬಳಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಾಲ್ವರನ್ನ ವಶಕ್ಕೆ ಪಡೆಯಲಾಗಿದ್ದು, ಇದು ರಾಜಕೀಯ ದೇಷಕ್ಕಾಗಿ ನಡೆದ ಕೃತ್ಯವೋ ಅಥವಾ ವ್ಯವಹಾರಕ್ಕೆ ಸಂಬಧಿಸಿದ ನಡೆಸಿರುವ ಕೃತ್ಯವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗೋವಾ ನೊಂದಣಿಯ ಕಾರ್ GA05 D0338 ಮೇಲೆ‌ ಬಂದ ಆರು‌ ಮಂದಿ ದುಷ್ಕರ್ಮಿಗಳು ಹಲ್ಲೆ ನಡೆಸಿ ಪಾರಾರಿಯಾಗಲು ಯತ್ನಿಸಿದ್ದರು.ಮೂಲಗಳ ಪ್ರಕಾರ, ಆರೋಪಿಗಳು ಬಿಹಾರದವರು ಎಂದೆನ್ನಲಾಗಿದ್ದು, ಸುಪಾರಿ ಪಡೆದು ಕಳೆದ ಮೂರು ದಿನಗಳಿಂದ ಅಂಕೋಲಾ ಪಟ್ಟಣದ ಹೊಟೇಲ್ ಒಂದರಲ್ಲಿ ವಾಸ್ತವ್ಯ ಇದ್ದರು ಎನ್ನಲಾಗಿದೆ..ಗಾಯಗೊಂಡ ಗೋಪಾಲಕೃಷ್ಣ ನಾಯಕ ಅವರನ್ನು  ಹೆಚ್ಚಿನ ಚಿಕಿತ್ಸೆಗಾಗಿ ಹೊನ್ನಾವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಲೆಗೆ ಯತ್ನಿಸಿದ ದುಷ್ಕರ್ಮಿಗಳ ಪತ್ತೆಗಾಗಿ ಅಂಕೋಲಾ ಪೊಲೀಸರು ಕಾರ್ಯಚರಣೆ ನಡೆಸಿದ್ದರು. ಆರೋಪಿಗಳು ಗೋವಾಕ್ಕೆ ಪರಾರಿಯಾಗುವ ವೇಳೆ, ಕಾರವಾರ ತಾಲೂಕಿನ ಮಾಜಾಳಿ ಬಳಿಯ ಕರ್ನಾಟಕ-ಗೋವಾ ಚೆಕ್ ಪೊಸ್ಟ್ ನಲ್ಲಿ ನಾಲ್ವರು ಬಿಹಾರ ಮೂಲದ ಶಂಕಿತ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ‌. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ದೀಪನ್ ಎಂ.ಎನ್  ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನ ಓದಿ/ ಕಾಂಗ್ರೇಸ ಮುಖಂಡ ಗೋಪಾಲಕೃಷ್ಣ ನಾಯಕ ಕೊಲೆಗೆ ಯತ್ನ