ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ : ಕಾರಿನಲ್ಲಿ ಬಂದ ಆರುಮಂದಿ ದುಷ್ಕರ್ಮಿಗಳು ಕಾಂಗ್ರೇಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಅವರಿಗೆ ಚಾಕು ಇರಿದಿರುವ ಘಟನೆ ಕಣಕಣೇಶ್ವರ ದೇವಸ್ಥಾನದ ಬಳಿ ನಡೆದಿದೆ.
ಗೋಪಾಲ ಕೃಷ್ಣ ನಾಯಕ ಅವರು ತಮ್ಮ ಕಾರನಿಂದ ಇಳಿದು ದೇವಸ್ಥಾನಕ್ಕೆ ಹೋಗು ವೇಳೆ ಅವರನ್ನ ಹಿಂಬಾಲಕಸಿ ಬಂದ ದುಷ್ಕರ್ಮಿಗಳು ಚಾಕು ಇರಿದಿದ್ದಾರೆನ್ನಲಾಗಿದೆ..ತಕ್ಷಣ ಅವರು ಸಮೀಪದಲ್ಲಿದ್ದ ಬ್ಯಾಂಕ್ ಒಂದರೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಜೀವ ತಪ್ಪಿಸಿಕೊಂಡಿದ್ದಾರೆನ್ನಲಾಗಿದೆ…ಸದ್ಯ ದುಷ್ಕರ್ಮಿಗಳು ಪರಾರಿಯಾಗಿದ್ದಾರೆನ್ನಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಗ್ಯಾಂಗ್ ಕಳೆದ ಮೂರು ದಿನಗಳಿಂದ ಅಂಕೋಲಾ ಪಟ್ಟಣದ ಹೊಟೇಲ್ ಒಂದರಲ್ಲಿ ವಾಸ್ತವ್ಯ ಇದ್ದರು..
ಗಾಯಗೊಂಡ ಗೋಪಾಲಕೃಷ್ಣ ನಾಯಕ ಅವರನ್ನ ಅಂಕೋಲಾದ ಅವಿನಾಶ ಆಸ್ಪತ್ರಗೆ ದಾಖಲಿಸಲಾಗಿದೆ. ಇನ್ನೂ ದುಷ್ಕರ್ಮಿಗಳ ಪತ್ತೆಗಾಗಿ ಅಂಕೋಲಾ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾಗಳು ಭೇಟಿ ನೀಡಿದ್ದಾರೆ.
ಇದನ್ನೂ ಓದಿ/ಕಾರವಾರದಲ್ಲಿ ಭೀಕರ ಬೆಂಕಿ ಅವಘಡ: ಚಲಿಸುತ್ತಿದ್ದ ಕಾರು ಹೊತ್ತಿ ಉರಿದು ಭಸ್ಮ!



