ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ: ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.ಉಳಿದ ಆರೋಪಿಗಳ ಬಂಧನಕ್ಕೂ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಅವರನ್ನು ಕೂಡ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಘಟನೆಯ ಬಳಿಕ ಗೋಪಾಲಕೃಷ್ಣ ನಾಯಕ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ ಸಚಿವರು, ಅವರು ಆರೋಗ್ಯವಾಗಿದ್ದಾರೆ. ಪ್ರಕರಣದ ತನಿಖೆ ಮುಂದುವರೆಯುತ್ತಿದ್ದು, ಈಗಾಗಲೇ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಗೋಪಾಲಕೃಷ್ಣ ನಾಯಕ ಅವರು ನಮ್ಮ ಪಕ್ಷದ ಯುವಕ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದವರು. ಹಿಂದಿನ ಚುನಾವಣೆಯಲ್ಲಿ ಟಿಕೆಟ್ ಕೂಡ ಕೇಳಿದ್ದರು ಎಂದ ಸಚಿವರು ಘಟನೆ ಕುರಿತು ಹೆಚ್ಚಿನ ಮಾಹಿತಿಗಳನ್ನ ಪೊಲೀಸರು ಸಂಗ್ರಹಿಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಬೆಳವಣಿಗೆಗಳು ನಿರೀಕ್ಷಿಸಲಾಗಿದೆ. ಎಂದದ್ದರು.
ಇದನ್ನೂ ಓದಿ/Exclusive video/ಗೋಪಾಲಕೃಷ್ಣ ನಾಯಕ ಮೇಲೆ ಅಟ್ಯಾಕ್ ಮಾಡಿದ ವಿಡಿಯೋ ವೈರಲ್

