ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಕಾಂಗ್ರೆಸ್ ಮುಖಂಡ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಆಪ್ತರಾಗಿರುವ ಗೋಪಾಲ ಕೃಷ್ಣ ನಾಯಕ ಮೇಲಿನ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದು ಈಗಾಗಲೇ ನಾಲ್ವರನ್ನ ಬಂಧಿಸಿದ್ದು, ಉಳಿದವರ ಬಂಧನಕ್ಕಾಗಿ ನಾಲ್ಕು ಪೊಲೀಸ್ ತಂಡ ರಚಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಎಸ್ಪಿ ಅವರು ಈಗಾಗಲೇ ನಾಲ್ವರನ್ನ ಗೋವಾ ಗಡಿಭಾಗದ ಮಾಜಾಳಿ ಚೆಕ್ ಪೋಸ್ಟ್ನಲ್ಲಿ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳು ಜಾಕೀರ್, ನೈಜಲ್, ಸದ್ದಾಂ ಹಾಗೂ ಇರ್ಫಾನ್ ಎಂದು ಗುರುತಿಸಲಾಗಿದೆ.ಬಂಧಿತರು ಗೋವಾ ಮೂಲದವರಾಗಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದು. ಆರೋಪಿಗಳು ಆಗಾಗ ಅಂಕೋಲಾಕ್ಕೆ ಬಂದು ಹೋಗುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ.ಘಟನೆಯ ವೇಳೆ ಇಬ್ಬರು ನೇರವಾಗಿ ದಾಳಿ ನಡೆಸಿದ್ದು, ಇನ್ನೂ ನಾಲ್ವರು ಸುತ್ತಮುತ್ತ ಇದ್ದು ಸಹಕರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನೂ ದಾಳಿಗೆ ಬಳಸಲಾದ ಎರಡು ಬೈಕ್ ಹಾಗೂ ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ.ಇನ್ನೂ ಪ್ರಮುಖವಾಗಿ, ಗೋಪಾಲ ಕೃಷ್ಣ ನಾಯಕ ಅವರ ಮೇಲೆ ದಾಳಿ ನಡೆಸಲು ಸುಪಾರಿ ಪಡೆದಿರುವ ಶಂಕೆ ವ್ಯಕ್ತವಾಗಿದ್ದು, ಆ ಕುರಿತಾಗಿಯು ಸಹ ತನಿಖೆ ನಡೆಸಲಾಗುತ್ತಿದೆ.
ಆರೋಪಿಗಳು ಪರಾರಿಯಾಗಲು ಅಂಕೋಲಾದಲ್ಲಿ ಬಾಡಿಗೆ ಕಾರನ್ನು ಬಳಸಿರುವುದು ಪತ್ತೆಯಾಗಿದ್ದು, ಕಾರಿನ ಚಾಲಕನನ್ನು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದ್ದು, ಇನ್ನೂ ಕೆಲವರ ಬಂಧನ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ/ಗೋಪಾಲಕೃಷ್ಣ ನಾಯಕ ಮೇಲೆ ಹಲ್ಲೆ ಪ್ರಕರಣ : ಗೃಹ ಸಚಿವ ಜಿ. ಪರಮೇಶ್ವರ ಹೇಳಿಕೆ

