ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ :ತಾಲೂಕಿನ ಬರ್ಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಳೆದ ಹದಿನೈದು ದಿನಗಳ ಹಿಂದೆ ನಡೆದ ಬೈಕ್ ಹಾಗೂ ಕಾರ ಅಪಘಾತದಲ್ಲಿ ಗಾಯಗೊಂಡಿದ್ದ ಸಹೋದರಿಬ್ಬರ ಪೈಕಿ ಓರ್ವ ವ್ಯಕ್ತಿ ಚಿಕಿತ್ಸೆಗೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ KS ಹೆಗಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಟ್ಕುಳಿಯ ವಿಠ್ಠಲ ಹರಿಕಾಂತ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಹೋದರಿಬ್ಬರೂ ಒಂದೇ ಬೈಕನಲ್ಲಿ ಬರ್ಗಿಯಿಂದ ಕುಮಟಾಕ್ಕೆ ತೆರಳುವಾಗ ಹೆದ್ದಾರಿ ಕ್ರಾಸ್ ಮಾಡುವ ವೇಳೆ ಕುಮಟಾ ಕಡೆಯಿಂದ ಅಂಕೋಲಾ ಕಡೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿತ್ತು.
ಅಪಘಾಯದಿಂದಾಗಿ ಇಬ್ಬರೂ ಸಹ ಗಂಭೀರವಾಗಿ ಗಾಯಗೊಂಡಿದ್ದರು. ಇದರಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ವಿಠ್ಠಲ ಅವರನ್ನ KS ಹೆಗಡೆ ಆಸ್ಪತ್ರೆಗೆ ದಾಖಲಿಸಿ ಕಳೆದ ಹದಿನೈದು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿ ಆಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

