ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳ ಸರಕಾರಿ ನೌಕರರ ಕಚೇರಿ ಸಮಯವನ್ನ ಬದಲಾವಣೆ ಮಾಡಿ ಆದೇಶಿಸಲಾಗಿದೆ.
ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಿಗೆ ಒಳಪಡುವ ಜಿಲ್ಲೆಗಳಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಮಾತ್ರ ಹೊಸ ಸಮಯ ಜಾರಿಗೆ ಬರಲಿದೆ. ಪರಿಷ್ಕೃತ ವೇಳೆಯಂತೆ, ಕಚೇರಿಗಳು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿ ಮಧ್ಯಾಹ್ನ 1.30ರೊಳಗೆ ಕಾರ್ಯ ಮುಗಿಸಲಿವೆ. ತೀವ್ರ ಬಿಸಿಲಿನಿಂದಾಗಿ ಈ ಜಿಲ್ಲೆಯಗಳಲ್ಲಿ ನೌಕರರು ಎದುರಿಸುತ್ತಿರು ಸಂಕಷ್ಟ ಹಾಗೂ ಆರೋಗ್ಯದ ವಿಚಾರದಲ್ಲಿ ಸಮಯ ಬದಲಾವಣೆ ಮಾಡಲಾಗಿದೆ.
ಈನಿಯಮ ಉತ್ತರ ಕರ್ನಾಕ ಭಾಗದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಸೇರಿದಂತೆ ಸಂಬಂಧಿತ ಎಲ್ಲಾ ಜಿಲ್ಲೆಗಳಿಗೆ ಮಾತ್ರ ಅನ್ವಯವಾಗಲಿದೆ. ಅಗತ್ಯವಿದ್ದಲ್ಲಿ ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ಸಿಇಒ ಸೂಚನೆ ಮೇರೆಗೆ ನೌಕರರು ಹೆಚ್ಚುವರಿ ಸಮಯದಲ್ಲೂ ಕರ್ತವ್ಯ ನಿರ್ವಹಿಸಬೇಕಾಗುತ್ತದೆ.
ಸಮಯ ಬದಲಾವಣೆ ಇದ್ದರೂ ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವ್ಯತ್ಯಯ ಉಂಟಾಗಬಾರದು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ. ನೌಕರರ ಸಂಘಟನೆಗಳ ಮನವಿಗೆ ಸ್ಪಂದನೆಯಾಗಿ ಕೈಗೊಳ್ಳಲಾದ ಈ ಕ್ರಮದಿಂದ ಉತ್ತರ ಕರ್ನಾಟಕದ ಸರ್ಕಾರಿ ಸಿಬ್ಬಂದಿಗೆ ಸ್ವಲ್ಪ ಮಟ್ಟಿನ ವಿಶ್ರಾಂತಿ ಸಿಗುವಂತಾಗಿದೆ..

