ಸುದ್ದಿಬಿಂದು ಬ್ಯೂರೋ ವರದಿ
ನವದೆಹಲಿ: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಭಾರತದಲ್ಲಿ ಇಂಧನ ಸರಬರಾಜಿನ ಮೇಲೆ ಪರಿಣಾಮ ಕಾಣಿಸಿಕೊಳ್ಳುತ್ತಿದ್ದು, ದೇಶದ ಹಲವು ಭಾಗಗಳಲ್ಲಿ ಗ್ಯಾಸ್ ಕೊರತೆ ತೀವ್ರಗೊಂಡಿದೆ. (Fuel Crisis India | Gas Shortage Alert) ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರದಿಂದ ಮಹತ್ವದ ಸಭೆ ನಡೆಸಲಾಗಿದ್ದು, ಆಟೋಗಳಿಗೆ ಗ್ಯಾಸ್ ಬದಲಿದೆ ಪೆಟ್ರೋಲ್ ಬಳಕೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ದೇಶದ ಬಹುತೇಕ ನಗರಗಳಲ್ಲಿ ಗ್ಯಾಸ್ ಪಂಪ್‌ಗಳ ಮುಂದೆ “ನೋ ಸ್ಟಾಕ್” ಫಲಕಗಳು ಕಾಣಿಸಿಕೊಳ್ಳುತ್ತಿದ್ದು, ಕೆಲವೆಡೆ ಗ್ರಾಹಕರು ರಾತ್ರಿ ಪೂರ್ತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. (LPG Price Hike | No Stock Situation) ಇನ್ನೂ ಕೆಲವು ಕಡೆ ಗ್ಯಾಸ್ ದರದಲ್ಲೂ ಏರಿಕೆ ಕಂಡುಬಂದಿದ್ದು, ಸಾರ್ವಜನಿಕರು ಹಾಗೂ ವಾಹನ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ನಡುವೆ, ದೇಶದ ಹಲವು ರಾಜ್ಯಗಳಲ್ಲಿ ಗ್ಯಾಸ್ ಸಮಸ್ಯೆ ಗಂಭೀರವಾಗಿರುವ ಹಿನ್ನೆಲೆ ಆಟೋ ಚಾಲಕರು ಹೆಚ್ಚು ಕಷ್ಟ ಅನುಭವಿಸುತ್ತಿದ್ದಾರೆ. (Auto Drivers Problem | Petrol Alternative Plan) ಗ್ಯಾಸ್ ಲಭ್ಯತೆ ಇಲ್ಲದ ಕಾರಣದಿಂದಾಗಿ ದಿನನಿತ್ಯದ ಬದುಕು ನಡೆಸುವುದು ಕಷ್ಟಕರವಾಗಿದೆ ಎಂಬುದು ಚಾಲಕರ ಅಳಲು. ಇಂತಹ ಪರಿಸ್ಥಿತಿಯಲ್ಲಿ ಪೆಟ್ರೋಲಿಯಂ ಸಚಿವಾಲಯದ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಪ್ರಮುಖ ತೀರ್ಮಾನ ಕೈಗೊಳ್ಳಲಾಗಿದೆ. ಆಟೋ ರಿಕ್ಷಾಗಳು ಗ್ಯಾಸ್ ಬದಲಿಗೆ ಪೆಟ್ರೋಲ್ ಬಳಸುವಂತೆ ಕೇಂದ್ರ ಸರ್ಕಾರದಿಂದ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಈ ತೀರ್ಮಾನ ನೋಡಿದರೆ ದೇಶದಲ್ಲಿ ಸದ್ಯಕ್ಕೆ ಗ್ಯಾಸ್ ಕೊರತೆ ನಿವಾರಣೆಯಾಗುವಂತೆ ಕಾಣುತ್ತಿಲ್ಲ. (Energy Crisis Impact | Future Fuel Strategy) ಇಂಧನ ಸರಬರಾಜಿನ ಸ್ಥಿತಿಗತಿಯನ್ನು ಅವಲಂಬಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ/ಹೆಲ್ಮೆಟ್ ಇಲ್ಲ, ಲೈಸನ್ಸ್ ಇಲ್ಲ : ವೇಗದ ಬೈಕ್ ಅಪಘಾತಕ್ಕೆ 17 ವರ್ಷದ ವಿದ್ಯಾರ್ಥಿ ಬಲಿ