ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಬಿಜೆಪಿ ಹಾಗೂ ಆರ್‌ಎಸ್‌ಎಸ್ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ಹತಾಶೆಯಿಂದ ಕೂಡಿದದ್ದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ  ಪ್ರತಿಕ್ರಿಯಿಸಿದ್ದಾರೆ.

ಖರ್ಗೆ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು “ವಿಷ ಸರ್ಪಗಳು” ಎಂದು ಹೋಲಿಸಿ ನೀಡಿದ ಹೇಳಿಕೆಯನ್ನು ಖಂಡಿಸಿರುವ ಅವರು, ಇದು ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರಿಗೆ ತಕ್ಕದ್ದಲ್ಲ ಎಂದು ಹೇಳಿದ್ದಾರೆ. ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿದ್ದು, ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ. ಆರ್‌ಎಸ್‌ಎಸ್ ದೇಶಭಕ್ತಿಯ ಪ್ರತೀಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ರೂಪಾಲಿ ನಾಯ್ಕ ತಿಳಿಸಿದ್ದಾರೆ.

ಇನ್ನೂ ಕಾಂಗ್ರೆಸ ದೇಶದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಜಾಪ್ರಭುತ್ವದ ಮಾರ್ಗದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಎದುರಿಸಲು ಸಾಧ್ಯವಾಗದೆ ಹತಾಶೆಯಿಂದ ಇಂತಹ  ಹೇಳಿಕೆಗಳನ್ನು ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇಂತಹ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇರುವುದರಿಂದ ಅವು ಖಂಡನೀಯ ಎಂದು ರೂಪಾಲಿ ಎಸ್. ನಾಯ್ಕ ಖರ್ಗೆ ಅವರ ಹೇಳಿಕೆಯನ್ನ ಖಂಡಿಸಿದ್ದಾರೆ.

ಇದನ್ನೂ ಓದಿ/ಅರಬೈಲ್ ಘಟ್ಟದಲ್ಲಿ ಭೀಕರ ದುರಂತ: ಕಾರಿಗೆ ಬೆಂಕಿ – ಚಾಲಕ ಸುಟ್ಟು ಕರಕಲು