ಸುದ್ದಿಬಿಂದು ಬ್ಯೂರೋ ವರದಿ ( Suddi Bindu digital news)
ಧಾರವಾಡ: ಯುವ ಕಾಂಗ್ರೆಸ ಮುಖಂಡನೊಬ್ಬನ ಮನೆಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ
ಮೆಹಬೂಬನಗರದಲ್ಲಿ ಕೆಲ ಕ್ಷಣದ ಹಿಂದೆ‌ ನಡೆದಿರುವ ಬಗ್ಗೆ ವರದಿಯಾಗಿದೆ.

ಘಟನೆ ತಿಳಿಯುತ್ತಿದ್ದಂತಡ ಧಾರವಾಡ ಉಪನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೆಹಬೂಬನಗರ ನಿವಾಸಿಯಾಗಿದ್ದ ಪೈರೋಜ್‌ಖಾನ್ ಪಠಾಣ ಎಂಬ ಯುವ ಮುಖಂಡನನ್ನು ಕೊಲೆ ಮಾಡಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಆದರೆ ಈ ಹತ್ಯೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಆರಂಭಿಸಿದ್ದು, ಇನ್ನಷ್ಟು ವಿವರಗಳು ಹೊರಬರುವ ನಿರೀಕ್ಷೆಯಿದೆ.

ಇದನ್ನೂ ಓದಿ/ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ರಾಜಣ್ಣನ ಕಾಮದಾಟ