ಸುದ್ದಿಬಿಂದು ಬ್ಯೂರೋ ವರದಿ
ಹಾವೇರಿ: ಕಾರನ್ನು ನಿಲ್ಲಿಸಿ ಹೊರಗಿಳಿದ ಕ್ಷಣದಲ್ಲೇ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ, ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ಸುಮಾರು 30 ಲಕ್ಷ ರೂಪಾಯಿ ನಗದು ಹಣ ದೋಚಿಕೊಂಡು(CarRobbery) ಪರಾರಿಯಾದ ಘಟನೆ. ಹಾವೇರಿ(HaveriCrime) ಜಿಲ್ಲೆ ಹಾನಗಲ್ ತಾಲೂಕಿನ ಬಾಳಂಬಿಡ ಗ್ರಾಮದ ಬಳಿ ನಡೆದಿದೆ.

ಶಿರಸಿ ಮೂಲದ ಅಬ್ದುಲ್ ರಹೀಮ್ ಸಿಕ್ಕಲಗಾರ ಅವರ ಮೇಲೆ ಇಬ್ಬರು ಆರೋಪಿಗಳು ದಾಳಿ ನಡೆಸಿದ್ದಾರೆ.
(IronRodAttack)ಕಬ್ಬಿಣದ ರಾಡಿನಿಂದ ಹಲ್ಲೆ (SeriousInjury) ನಡೆಸಿದ ಪರಿಣಾಮ ಗಂಭೀರ ಗಾಯವಾಗಿರುವುದಾಗಿ ತಿಳಿದುಬಂದಿದೆ.

ಹಲ್ಲೆ ಬಳಿಕ ಆರೋಪಿಗಳು ಕಾರಿನಲ್ಲಿದ್ದ ಹಣವನ್ನು ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ನಂತರ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.(30LakhRobbery) ಅಡೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು (PoliceCase)ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಸುತ್ತಮುತ್ತಲಿನ ಸಿಸಿಟಿವಿ (CCTVCheck) ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಗಾಯಗೊಂಡ ಅಬ್ದುಲ್ ರಹೀಮ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,(SearchOperation)ಚಿಕಿತ್ಸೆ ಮುಂದುವರಿದಿದೆ.

ಇದನ್ನೂ ಓದಿ/ಕರಾವಳಿಯಲ್ಲಿ ಕಮಲ ಬಲ, ಜೆಡಿಎಸ್ ದುರ್ಬಲ : ರೂಪಾಲಿ ನಾಯ್ಕ