ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಬನವಾಸಿ ಬ್ಲಾಕ್ ಕಾಂಗ್ರೆಸ್ ಘಟಕದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ವಿವಿಧ ಹಂತದ ಪದಾಧಿಕಾರಿಗಳಾಗಿ ನೇಮಕ ಮಾಡಿರುವುದನ್ನ‌ ಕಾಂಗ್ರೆಸ ಜಿಲ್ಲಾಧ್ಯಕ್ಷರು ಬ್ರೇಕ್‌ ಹಾಕಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನಿರ್ದೇಶನದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಾಯಿ ಗಾಂವ್ಕರ್ ಅವರು ಆ ಪಟ್ಟಿಯನ್ನು ತಡೆಹಿಡಿದಿದ್ದಾರೆ.
ಬ್ಲಾಕ್ ಮಟ್ಟದಲ್ಲಿ ಹೊರಬಿದ್ದ ಈ ಪಟ್ಟಿಯಲ್ಲಿ ಆರ್‌ಎಸ್‌ಎಸ್ ಹಿನ್ನೆಲೆ ಹೊಂದಿರುವ ಕೆಲವರನ್ನು ಪ್ರಮುಖ ಸ್ಥಾನಗಳಿಗೆ ನೇಮಕ ಮಾಡಲಾಗಿತ್ತು. ಇದು ಕಾರ್ಯಕರ್ತರ ಆಕ್ರೋಶಕ್ಕೂ ಕಾರಣವಾಗಿತ್ತು.

ಪಕ್ಷದ ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆದಿದ್ದ ಈ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಕಾರ್ಯಕರ್ತರು, ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ತುರ್ತು ಪರಿಶೀಲನೆ ನಡೆಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಹೈಕಮಾಂಡ ಸೂಚನೆಯಂತೆ ನೇಮಕಾತಿ ಪಟ್ಟಿಯನ್ನು ತಡೆಹಿಡಿಯುವ ನಿರ್ಧಾರ ಕೈಗೊಂಡಿದ್ದಾರೆ. ಈ ಕ್ರಮಕ್ಕೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಿಂದ ಬೆಂಬಲ ವ್ಯಕ್ತವಾಗಿದೆ. ಪಕ್ಷದ ಮೂಲ ತತ್ವಗಳನ್ನು ಕಾಪಾಡುವ ದಿಟ್ಟ ಹೆಜ್ಜೆಯೆಂದು ಅವರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ/ಕಾರವಾರದಲ್ಲಿ ಲೀಸ್ ಹೆಸರಿನಲ್ಲಿ ಲೂಟಿ? ಸರ್ಕಾರಕ್ಕೆ ಕೋಟಿ ನಷ್ಟ