ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ದಾಖಲೆಗಳನ್ನು ಬಳಸಿಕೊಂಡು ಆರೋಪಿಗಳಿಗೆ ಜಾಮೀನು ಪಡೆಯಲು ಸಹಾಯ ಮಾಡುತ್ತಿದ್ದ ಜಾಲದ ಪ್ರಮುಖ ವ್ಯಕ್ತಿಯನ್ನು ಭಟ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.

Fake Documents, Aadhaar Fraud, Bail Scam, Court Crime ಈ ಘಟನೆ 2025ರ ಜೂನ್ 30ರಂದು ಭಟ್ಕಳದ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಬೆಳಕಿಗೆ ಬಂದಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಕ್ರೈಂ ನಂ. 56/2025 ಪ್ರಕರಣದ ಆರೋಪಿಗಳಿಗೆ ಜಾಮೀನು ಕೊಡಿಸುವ ಉದ್ದೇಶದಿಂದ ಕೆಲವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರು ಸಲ್ಲಿಸಿದ ಆಧಾರ್ ಕಾರ್ಡ್ ಹಾಗೂ ಪಹಣಿ ದಾಖಲೆಗಳನ್ನು ಶೂರಿಟಿ ಮ್ಯಾನೇಜ್‌ಮೆಂಟ್ ಸಿಸ್ಟಮ್ ಮೂಲಕ ಪರಿಶೀಲಿಸಿದಾಗ ಅವು ನಕಲಿ ಎಂದು ಪತ್ತೆಯಾಯಿತು. ದಾಖಲೆಗಳ ಪರಿಶೀಲನೆ ನಡೆಯುತ್ತಿರುವುದನ್ನು ಅರಿತ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ರಾಸಾಯನಿಕ ಟ್ಯಾಂಕರ್ ಬ್ಲಾಸ್ಟ್: ಹೆದ್ದಾರಿಯಲ್ಲಿ ಭಾರಿ ಅಗ್ನಿ ಅವಘಡ, ಚಾಲಕ‌‌ ಗಂಭೀರ

Court Verification, Digital Fraud Detection, Legal Documents Scam ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ, ಮಂಗಳೂರಿನ ಮರೋಳಿ ನಿವಾಸಿ ಮಹೇಶ ಬಿ. ಮೋಹನ ನಾಯಕ ಎಂಬಾತನನ್ನು ಬಂಧಿಸಿದ್ದಾರೆ. ಕಾನೂನು ಪ್ರಕಾರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Police Investigation, Arrest News, Judicial Custody, Crime Update ಈ ಕಾರ್ಯಾಚರಣೆ ಭಟ್ಕಳ ನಗರ ಪೊಲೀಸ್ ನಿರೀಕ್ಷಕರಾದ ದಿವಾಕರ ಪಿ.ಎಂ ಅವರ ನೇತೃತ್ವದಲ್ಲಿ ನಡೆಯಿತು. ಪಿಎಸ್ಐ ನವೀನ್ ಎಸ್. ನಾಯ್ಕ ಹಾಗೂ ಸಿಬ್ಬಂದಿಗಳಾದ ದಿನೇಶ್ ನಾಯಕ ಮತ್ತು ಮಹಾಂತೇಶ ಹಿರೇಮಠ ತಂಡದಲ್ಲಿ ಭಾಗವಹಿಸಿದ್ದರು.

Police Operation, Crime Teamwork, Law Enforcement India ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡದ ಕಾರ್ಯವೈಖರಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮೆಚ್ಚಿದ್ದಾರೆ. ಈ ನಕಲಿ ದಾಖಲೆ ಜಾಲದಲ್ಲಿ ಇನ್ನೂ ಯಾರು ಭಾಗಿಯಾಗಿದ್ದಾರೆ ಎಂಬುದರ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.