ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಏಪ್ರಿಲ್ 8ರಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಕಾರು ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಇದು ಸಾಮಾನ್ಯ ರಸ್ತೆ ಅಪಘಾತವಲ್ಲ, ಪೂರ್ವಯೋಜಿತ ಕೊಲೆ ಎಂಬುದು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ. (Karnataka Crime News, Yellapur Case, Car Fire Mystery, Breaking News Karnataka)

 KA-04/MJ-8986 ನೋಂದಣಿಯ ಕಾರು ಯಲ್ಲಾಪುರದಿಂದ ಕಾರವಾರದತ್ತ ಸಾಗುವಾಗ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಉರುಳಿ ಬೆಂಕಿ ಹೊತ್ತಿಕೊಂಡಿದೆ ಎಂದು ಭಾವಿಸಲಾಗಿತ್ತು. ಕಾರಿನಲ್ಲಿದ್ದ ವ್ಯಕ್ತಿ ಸಹ ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಪ್ರಕರಣವನ್ನು ಅಪಘಾತವೆಂದು ದಾಖಲಿಸಲಾಗಿತ್ತು. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 281 ಮತ್ತು 106(1) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ( Accident or Murder, Car Accident Investigation, Police Case India, Crime Investigation)

ಆದರೆ ಘಟನೆಗೆ ಸಂಬಂಧಿಸಿದಂತೆ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಮರುತನಿಖೆ ಕೈಗೊಂಡು, ಇದು ಕೊಲೆ ಪ್ರಕರಣವಾಗಿರಬಹುದೆಂಬ ಅನುಮಾನವನ್ನು ಗಂಭೀರವಾಗಿ ಪರಿಗಣಿಸಿದರು. ಬಳಿಕ ಸೆಕ್ಷನ್ 103 ಹಾಗೂ 238 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ. ಅವರ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸಲಾಯಿತು. (Murder Investigation, Karnataka Police, Crime Twist, Police Action)

ಸುಟ್ಟು ಕರಕಲಾದ ಕಾರಿನ ಅವಶೇಷಗಳು, ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಲಾಗಿದ್ದು, ಆತ ಬೆಳಗಾವಿಯ ಕನಬರಗಿ ರಸ್ತೆಯ ಚಂದ್ರಮೌಳಿ ಕಾಲೋನಿಯ ನಿವಾಸಿ ನಿತೇಶ್ ಜಗನ್ನಾಥ ಧಾಪಳೆ (35) ಎಂದು ತಿಳಿದುಬಂದಿದೆ. (Victim Identified, Belagavi News, Crime Victim, CCTV Evidence)

ತನಿಖೆಯಲ್ಲಿ ವೈಯಕ್ತಿಕ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗಿದೆ, ಹಳೆ ಹುಬ್ಬಳ್ಳಿಯ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹೆಗ್ಗೇರಿ ಮೂಲದ ಅಬ್ದುಲ್ ನಹೀಮ್ ಬಸೀರ್ ಅಹ್ಮದ್ ಮುಜಾವರ್, ದಿವಡಗಿ ಓಣಿಯ ಮೌಲಾಸಾಬ್ ಬಾಬಾಜಾನ್ ಬಾಡ ಹಾಗೂ ಗಾರ್ಡನ್ ಪೇಟೆಯ ದಾದಾಪೀರ್ ಅಲಿಯಾಸ್ ಅಪ್ತಾಬ್ ಮೆಹಬೂಬ್‌ಸಾಬ್ ಬಾಳಸಂಗಿ ಎಂದು ಗುರುತಿಸಲಾಗಿದೆ.
Arrested Accused, Hubballi Crime, Murder Suspects, Police Arrest

ಕೃತ್ಯಕ್ಕೆ ಬಳಸಿದ್ದ ಬಲೆನೊ ಕಾರು, ಬರ್ಗ್‌ಮ್ಯಾನ್ ಹಾಗೂ ಆಕ್ಟಿವಾ ಹೋಂಡಾ ಸ್ಕೂಟರ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. (Seized Vehicles, Crime Evidence, Court Custody, Judicial Remand

ಮೃತ ನಿತೇಶ್ ವಿರುದ್ಧ ಬೆಳಗಾವಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಗಳ್ಳತನ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ.Criminal Background, Theft Cases, Police Records, Crime History

ಅಪಘಾತದ ಸನ್ನಿವೇಶ ಸೃಷ್ಟಿಸಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದ ಆರೋಪಿಗಳ ಕುತಂತ್ರವನ್ನು ಪೊಲೀಸರು ಭೇದಿಸಿದ್ದು, ಕೊನೆಗೂ ಖತರ್ನಾಕ ಹಂತಕರು ಕಾನೂನಿನ ಜಾಲಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ/Heat Wave Alert: ಉತ್ತರ ಕನ್ನಡದಲ್ಲಿ ಐದು ದಿನ‌ ಯಲ್ಲೋ‌ ಅಲರ್ಟ್