ಸುದ್ದಿಬಿಂದು ಬ್ಯೂರೋ ವರದಿ
ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿ ಮಾವಿನ ಕಾಯಿ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಗ್ರಾಮ ಸಹಾಯಕ ಮೃತಪಟ್ಟಿರುವ ಘಟನೆ ಮಣಿಪಾಲ‌ DC  ಕಚೇರಿ ಬಳಿ ನಡೆದಿದೆ.

ಘಟನೆಯಲ್ಲಿ ಸದಾನಂದ ದೇವಾಡಿಗ (55) ಎಂಬಾತನ ಮೃತಪಟ್ಟಿರುವ ಗ್ರಾಮ ಸಹಾಯಕನಾಗಿದ್ದಾನೆ. ಈತ ಅಲೆವೂರು ನಿವಾಸಿಯಾಗಿದ್ದರು. ಗ್ರಾಮ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಸದಾನಂದ  ಜಿಲ್ಲಾಧಿಕಾರಿ ಕಚೇರಿಯ ಹಿಂಬದಿಯಲ್ಲಿದ್ದ ಮಾವಿನ ಮರದಲ್ಲಿ ಕಾಯಿ ಕೊಯ್ಯುವ ವೇಳೆ ಮೇಲ್ಗಡೆ ಹಾದುಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ಮಣಿಪಾಲ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ/ SSLC ಪರೀಕ್ಷೆ ಬರೆದರೂ ‘ಗೈರು :ಪ್ರಾಧಿಕಾರದ ಎಡವಟ್ಟು