ಸುದ್ದಿಬಿಂದು ಬ್ಯೂರೋ ವರದಿ/ಕುಮಟಾ : ಪಟ್ಟಣದ ಇಂದಿರಾ ಕ್ಯಾಂಟೀನ್ನಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದೆ ಎಂದು ಆರೋಪಿಸಿದ ಸ್ಥಳೀಯರು ಗ್ರೇಡ್2 ತಹಶಿಲ್ದಾರರ ಸತೀಶ ಗೌಡ ಅವರ ಮೂಲಕ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಇಂದಿರಾ ಕ್ಯಾಂಟಿನ್ನಲ್ಲಿ ಕುಡಿಯುವ ನೀರಿನೊಂದಿಗೆ ಮಣ್ಣು ಹಾಗೂ ದುರ್ವಾಸನೆ ಬರುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸ್ಥಳೀಯ ನಿವಾಸಿಗಳು ಹೇಳುತ್ತಿರೋ ಪ್ರಕಾರ, ಪೈಪ್ಲೈನ್ ಹಾನಿಯಾಗಿರುವ ಕಾರಣ ಚರಂಡಿ ನೀರು ಕುಡಿಯುವ ನೀರಿನ ಲೈನ್ಗೆ ಸೇರಿಕೊಳ್ಳುತ್ತಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಜನರಲ್ಲಿ ಜ್ವರ, ವಾಂತಿ ಹಾಗೂ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿರುವುದಾಗಿ ತಿಳಿಸಿದ್ದಾರೆ.
ಮನವಿ ಸ್ವೀಕರಿಸಿದ ಅಧಿಕಾರಿಗಳು, ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಕಲುಷಿತ ನೀರಿನ ಪೂರೈಕೆಯನ್ನು ನಿಲ್ಲಿಸಿ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂಬಂಧ ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ/ಮೇ 26ರಂದು ಕೇರಳ ಪ್ರವೇಶಿಸಲಿದೆ ಮುಂಗಾರು : ರಾಜ್ಯದಲ್ಲಿಯೂ ಮಳೆ ಎಚ್ಚರಿಕೆ

