ಸುದ್ದಿಬಿಂದು ಬ್ಯೂರೋ ವರದಿ
ಹಳಿಯಾಳ : ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರೀ ಗಾಳಿ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಿಡಿಲು ಬಡಿದು ಮೂರು ಜಾನುವಾರುಗಳು ಸಾವನ್ನಪ್ಪಿದ ಘಟನೆ ನಡೆದಿದೆ.

ಸಿಡಿಲು ಬಡಿದು ರೋಮನ್ ಬಾವಟಿಸ್ ದಾಲ್ಮೆತ್ ಅವರಿಗೆ ಸೇರಿದ ಎರಡು ಎತ್ತುಗಳು ಹಾಗೂ ಒಂದು ಆಕಳು ಸ್ಥಳದಲ್ಲೇ‌ಸಾವನ್ನಪ್ಪಿದೆ
ಘಟನೆಯಿಂದಾಗಿ ಈ ಕುಟುಂಬಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಇದೇ ವೇಳೆ ಭಾರೀ ಗಾಳಿ ಮಳೆಯಿಂದಾಗಿ ಮಂಗಳವಾಡ ಪ್ರೌಢಶಾಲೆಯ ಮೇಲ್ಚಾವಣಿ ಹಾರಿ ಹೋಗಿದ್ದು, ಶಾಲಾ ಕಟ್ಟಡಕ್ಕೆ ಹಾನಿಯಾಗಿದೆ. ಘಟನೆಯ ಕುರಿತು ಸಂಬಂಧಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಪರಿಶೀಲನೆ ನಡೆಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಭಾರೀ ಗಾಳಿ ಮಳೆ ಹಾಗೂ ಸಿಡಿಲಿನ ಅಬ್ಬರದಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಹಾನಿಗೊಳಗಾದ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ/ಕುಮಟಾ ಇಂದಿರಾ ಕ್ಯಾಂಟೀನ್‌ನಲ್ಲಿ ಕಲುಷಿತ ನೀರು ಬಳಕೆ ಆರೋಪ : ಸ್ಥಳೀಯರಿಂದ ಅಧಿಕಾರಿಗಳಿಗೆ ದೂರು