ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ತೆರಳಿದ್ದವರ ಮೇಲೆ ಭೀಕರ ದುರಂತ ಸಂಭವಿಸಿದ್ದು, ಮೂವರು ನೀರುಪಾಲಾಗಿರುವ ಘಟನೆ ಭಾನುವಾರ ನಡೆದಿದೆ. ಘಟನೆಯಲ್ಲಿ ಒಟ್ಟು 9 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, 8ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಭಟ್ಕಳದ ಶಿರಾಲಿ ಮೂಲದವರಾಗಿರುವ ಒಂದೇ ಕುಟುಂಬದ 11 ಮಂದಿ ಸೇರಿ ನದಿಗೆ ಕಪ್ಪೆ ಚಿಪ್ಪು ತೆಗೆಯಲು ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಪೈಕಿ ಹಲವರು ನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದ್ದು, ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿರುವ ಭೀತಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಗಂಭೀರವಾಗಿ ಅಸ್ವಸ್ಥಗೊಂಡವರನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳ, ಸ್ಥಳೀಯ ಮೀನುಗಾರರು ಹಾಗೂ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆಯೇ ಭಟ್ಕಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ತಟ್ಟೆಹಕ್ಕಲು ನದಿ ತೀರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

