ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ಕಡಲ ತೀರದಲ್ಲಿ ಚಿಪ್ಪಿಕಲ್ಲು ತೆಗೆಯಲು ತೆರಳಿದ್ದವರ ಮೇಲೆ ಸಂಭವಿಸಿದ ದುರಂತಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ನಾಪತ್ತೆಯಾಗಿದ್ದ ಮಂಜಮ್ಮ ಹಾಗೂ ನಾಗರತ್ನ ಎಂಬವರ ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಪತ್ತೆಹಚ್ಚಿ ಹೊರತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳದಲ್ಲಿ ಶೋಧ ಕಾರ್ಯ ತೀವ್ರಗೊಳಿಸಲಾಗಿದ್ದು, ಇನ್ನೂ ನಾಪತ್ತೆಯಾಗಿರುವ ಮಾದೇವ ನಾಯ್ಕ ಎಂಬವರಿಗಾಗಿ ಹುಡುಕಾಟ ಮುಂದುವರಿದಿದೆ.
ತಟ್ಟೆಹಕ್ಕಲು ಕಡಲ ತೀರ ಪ್ರದೇಶದಲ್ಲಿ ಚಿಪ್ಪಿಕಲ್ಲು ಸಂಗ್ರಹಿಸಲು ತೆರಳಿದ್ದ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿ ಈ ದುರಂತ ಸಂಭವಿಸಿದೆ .

ಆರಂಭದಲ್ಲಿ ಹಲವು ಮಂದಿ ನಾಪತ್ತೆಯಾಗಿದ್ದರೆ, ಇದೀಗ ಕ್ರಮೇಣ ಶವಗಳು ಪತ್ತೆಯಾಗುತ್ತಿವೆ.ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದುರಂತದಿಂದ ಭಟ್ಕಳ ತಾಲೂಕಿನಲ್ಲಿ ಶೋಕ ಸಾಗರದಲ್ಲಿ ಮುಳುಗಿದ್ದು, ಮೃತರ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದೆ.

ಸರಕಾರಿಂದ ಮೃತ ಕುಟುಂಬಕ್ಕೆ ತಲಾ 5ಲಕ್ಷ ಘೋಷಣೆ
ಶಿರಾಲಿಯ ತಟ್ಟೆಹಲ್ಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದ ವೇಳೆ ಇದುವರಗೆ 11ಮಂದಿ ಮೃತಪಟ್ಟಿದ್ದು, ಮೃತ ಕುಟಂಬಕ್ಕೆ ರಾಜ್ಯ ಸರಕಾರಿಂದ ತಲಾ 5ಲಕ್ಷ ಹಾಗೂ ಚಿಕಿತ್ಸೆ ಪಡೆಯುತ್ತಿರುವವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಸರಕಾರ ಘೋಷಣೆ ಮಾಡಿದೆ.

ಇದನ್ನೂ ಓದಿ/ಕಪ್ಪೆ ಚಿಪ್ಪು ದುರಂತದಲ್ಲಿ ಮಹಿಳೆಯರೇ ಬಲಿ: ಶಿರಾಲಿ ತಟ್ಟಹಕ್ಕಲು ನದಿಯಲ್ಲಿ 8 ಮಂದಿ ಸಾವು, 3 ಮಂದಿ ನಾಪತ್ತೆ