ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಭಾಗದಲ್ಲಿ ಸಂಭವಿಸಿದ ಭೀಕರ ಚಿಪ್ಪೆಕಲ್ಲು ದುರಂತದಲ್ಲಿ ಮೃತಪಟ್ಟ ಕುಟುಂಬಗಳ ನೆರವಿಗೆ ಸಚಿವ ಮಂಕಾಳ ವೈದ್ಯ ಮಾನವೀಯತೆ ಮೆರೆದಿದ್ದು, ತಮ್ಮ ಇಲಾಖೆಯ ವತಿಯಿಂದ ರೂ೧೦ ಲಕ್ಷ ಪರಿಹಾರ ಮಂಜೂರು ಮಾಡಿಸಿರುವುದಾಗಿ ತಿಳಿಸಿದ್ದಾರೆ. ದುರಂತದಲ್ಲಿ ಕುಟುಂಬದ ಆಧಾರಸ್ತಂಭಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ತಕ್ಷಣ ನೆರವಾಗುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ದುರಂತದ ಬಳಿಕ ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಚಿವರು, ಬದುಕಿನ ಸಂಕಷ್ಟದ ನಡುವೆ ಸರ್ಕಾರ ಮತ್ತು ಸಮಾಜ ಸಂತ್ರಸ್ತ ಕುಟುಂಬಗಳ ಜೊತೆ ನಿಲ್ಲಬೇಕಾಗಿದ್ದು ಇದಕ್ಕೆ ತಾವು ಬದ್ದರಿದ್ದೆವೆ. ಈಗಾಗಲೇ ಸರ್ಕಾರದಿಂದ ತಲಾ ೫ ಲಕ್ಷ ಪರಿಹಾರ ಮಂಜೂರಾಗಿದ್ದು, ಅದಕ್ಕೆ ಹೆಚ್ಚುವರಿಯಾಗಿ ತಮ್ಮ ಇಲಾಖೆಯಿಂದ ೧೦ ಲಕ್ಷ ನೆರವು ಬಿಡುಗಡೆ ಮಾಡಲಾಗಿದ್ದೂ ಒಟ್ಟೂ ೧ಕೋಟಿ ೬೫ ಲಕ್ಷ ಪರಿಹಾರ ನೀಡಿದಂತಾಗಿದೆ ಎಂದು ತಿಳಿಸಿದರು.
ಅಲ್ಲದೆ, ಪರಿಹಾರದ ಚೆಕ್ಗಳು ಸಿದ್ದವಾಗಿದ್ದು ಈ ಕೂಡಲೆ ವಿತರಿಸಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು. ಮೃತರ ಮಕ್ಕಳ ಶಿಕ್ಷಣ, ಕುಟುಂಬದ ಭವಿಷ್ಯದ ಕುರಿತು ವಿಶೇಷ ಗಮನ ಹರಿಸಲಾಗುವುದು. ಅನಾಥ ಮಕ್ಕಳಿಗೆ ಅಗತ್ಯವಿರುವ ಎಲ್ಲ ಸಹಕಾರ ಒದಗಿಸಲಾಗುವುದು ಎಂದರು.
ಈ ದುರಂತದಿಂದ ಪಡುಶಿರಾಲಿ ಗ್ರಾಮದಲ್ಲಿ ಇನ್ನೂ ದುಃಖದ ವಾತಾವರಣ ಮುಂದುವರಿದಿದೆ. ಗ್ರಾಮಸ್ಥರು, ನಾಮಧಾರಿ ಸಮಾಜಬಾಂಧವರು ಸಹ ಮೃತರ ಕುಟುಂಬಗಳ ನೆರವಿಗೆ ಮುಂದಾಗುತ್ತಿದ್ದು, ಮಾನವೀಯತೆ ಮೆರೆಯುತ್ತಿದ್ದಾರೆ
ಇದನ್ನೂ ಓದಿ/ಡಿಕೆ ಶಿವಕುಮಾರ ಸಿಎಂ ಸಚಿವ ಸಂಪುಟದಲ್ಲಿ ಮುಂದುವರಿಯುವ ಸಾಧ್ಯತೆ ಇರುವ ಸಚಿವರು ಯಾರು..?

