ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಕಾರವಾರದಿಂದ ಭಟ್ಕಳ ಕಡೆಗೆ ಸಂಚರಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಯುವಕನೊಬ್ಬ ಮೃತಪಟ್ಟ ಘಟನೆ ಕುಮಟಾ ಸಮೀಪದ ನುಶಿಕೋಟೆ ರೈಲ್ವೆ ಮಾರ್ಗದಲ್ಲಿ ನಡೆದಿದೆ.
ಮೃತ ಯುವಕ ಭಟ್ಕಳ ತಾಲೂಕಿನ ತೆಂಗಿನಗುಂಡಿ ನಿವಾಸಿ ಯತೀಂದ್ರ ಲಕ್ಷಣ ಮೊಗೇರ (18) ಎಂದು ಗುರುತಿಸಲಾಗಿದೆ. ಯತೀಂದ್ರ ಕಾರವಾರ ಕಡೆಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಎನ್ನಲಾಗಿದೆ.,. ಈ ವೇಳೆ ನುಶಿಕೋಟೆ ಸಮೀಪ ರೈಲು ಚಲಿಸುವಾಗ ಕೆಳಗಡೆ ಬಿದ್ದು ಮೃತಪಟ್ಟಿದ್ದಾನೆ.
ರೈಲಿನಿಂದ ಕೆಳಗೆ ಬಿದ್ದ ಪರಿಣಾಮ ಯತೀಂದ್ರನ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಕುಮಟಾ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..
ಇದನ್ನೂ ಓದಿ/ಉತ್ತರಕನ್ನಡದ ಹಾಸ್ಟೆಲ್ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಹೆರಿಗೆ : ನವಜಾತ ಶಿಶು ಸಾವು

