ಸುದ್ದಿಬಿಂದು ಬ್ಯೂರೋ ವರದಿ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದಲ್ಲಿ ರೌಡಿ ಶೀಟರ್ನೊಬ್ಬ ಕುಡಿದ ಅಮಲಿನಲ್ಲಿ ಪೊಲೀಸರ ಎದುರು ರಂಪಾಟ ನಡೆಸಿ, ಹಲ್ಲೆಗೆ ಯತ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ನಡೆದಿದೆ.
ಘಟನೆಯ ವೇಳೆ ಪೊಲೀಸ್ ಸಿಬ್ಬಂದಿಗಳು ಚಾಣಾಕ್ಷತನದಿಂದ ನಿಭಾಯಿಸಿದ್ದಾರೆ. ಆತನ ವರ್ಥನೆಯನ್ನ ಕಂಡು ಸಾರ್ವಜನಿಕರಲ್ಲಿ ನಡುಕ ಹುಟ್ಟಿಸಿದೆ. ಹಳಿಯಾಳದ ಮೌರ್ಯ ಹೋಟೆಲ್ ಸಮೀಪ ಕುಡಿದ ಅಮಲಿನಲ್ಲಿದ್ದ ರೌಡಿ ಶೀಟರ್ ಪೊಲೀಸ್ ಜೀಪ್ನ್ನು ತಡೆದಿದ್ದಾನೆ. ಬಳಿಕ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ಹಲ್ಲೆ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ರೌಡಿಯ ಆರ್ಭಟದಿಂದ ಕೆಲಕಾಲ ಪರಿಸ್ಥಿತಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರೂ, ರೌಡಿ ಶೀಟರ್ನ ವರ್ತನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಯಿತು. ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಿರುವುದಕ್ಕೆ ಆತನ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆಯೇ ಹಲ್ಲೆ ಗೆ ಮುಂದಾಗಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ/ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು; ಕುಮಟಾ ಕಡ್ಲೆ ಸಮುದ್ರ ತೀರದಲ್ಲಿ ದುರ್ಘಟನೆ



