ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮೀಪ ಸಮುದ್ರ ತೀರದಲ್ಲಿ ಈಜಲು ತೆರಳಿದ್ದ ವೇಳೆ ಸಮುದ್ರದ ಅಲೆಗೆ ಸಿಲುಕಿ ಓರ್ವ ಪ್ರವಾಸಿಗ ಮೃತಪಟ್ಟಿರುವ ದುರ್ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಮೃತ ಪ್ರವಾಸಿಗ ಪುಣಾ ಮೂಲದವರು ಎಂದು ತಿಳಿದು ಬಂದಿದೆ, ಅವರ ಗುರುತು ಇನ್ನಷ್ಟೇ ಅಧಿಕೃತವಾಗಿ ದೃಢಪಟ್ಟಿ ಮೃತ ವ್ಯಕ್ತಿ, ಹೈದರಾಬಾದ್ನಿಂದ ಐವರು ಸ್ನೇಹಿತರು ಪ್ರವಾಸಕ್ಕಾಗಿ ಕುಮಟಾ ತಾಲೂಕಿನ ಕಡ್ಲೆಗೆ ಆಗಮಿಸಿ, ಅಲ್ಲಿನ ಬ್ಲ್ಯೂ ವೇಸ್ ರೆಸಾರ್ಟ್ನಲ್ಲಿ ಕಳೆದ ಮೂರು ದಿನಗಳಿಂದ ವಾಸ್ತವ್ಯ ಹೂಡಿದ್ದರು ಎನ್ನಲಾಗಿದೆ.. ಸೋಮವಾರ ಬೆಳಿಗ್ಗೆ ಅವರಲ್ಲಿ ಇಬ್ಬರು ಕಡ್ಲೆ ಸಮುದ್ರ ತೀರದಲ್ಲಿ ಈಜಲು ಸಮುದ್ರಕ್ಕೆ ಇಳಿದಿದ್ದರು.
ಈ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿದ ಇಬ್ಬರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮತ್ತೋರ್ವ ಸುರಕ್ಷಿತವಾಗಿ ದಡ ಸೇರಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಮೃತದೇಹದ ಪತ್ತೆಗಾಗಿ ಶೋಧ ಕಾರ್ಯ ಮುಂದುವರರೆದಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ..
ಇದನ್ನೂ ಓದಿ/ ಮಾರಿ ಹೊರೆ ಸ್ಥಳಾಂತರ ವೇಳೆ ಗಲಾಟೆ; ವ್ಯಕ್ತಿಯ ಕುತ್ತಿಗೆ ಹಿಸುಕಿ ಕೊಲೆ ಯತ್ನ, ಕುಮಟಾ ಠಾಣೆಯಲ್ಲಿ ಪ್ರಕರಣ

