ಸುದ್ದಿಬಿಂದು ಬ್ಯೂರೋ ವರದಿ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ರೌಡಿ ಶೀಟರ್ ಪೊಲೀಸ್ ಸಿಬ್ಬಂದಿಯ ಮೇಲೆಯೇ ಹಲ್ಲೆ ನಡೆಸಿದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.

ಕುಡಿದ ಮತ್ತಿನಲ್ಲಿ ಪೊಲೀಸ್ ಜೀಪ್ ತಡೆದು ಕರ್ತವ್ಯದಲ್ಲಿದ್ದ ಸಿಬ್ಬಂದಿಯ ಮೇಲೆ ಹಲ್ಲೆಗೆ ಮುಂದಾಗಿದ್ದ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ರೌಡಿ ಶೀಟರ್ ವಿರುದ್ಧ ಪ್ರಕರಣ ದಾಖಲಾಗಿದ್ದರೂ, ಇದೀಗ ಕರ್ತವ್ಯ ಲೋಪದ ಆರೋಪದಡಿ ಹಳಿಯಾಳ ಪೊಲೀಸ್ ಠಾಣೆಯ ಎಸ್ಸೈಬಸವರಾಜ್ ಅವರನ್ನು ಅಮಾನತು ಮಾಡಲಾಗಿದ್ದು ಜೊತೆಯಲ್ಲಿ 8 ಸಿಬ್ಬಂದಿಗಳನ್ನ ಮುಂದಿನ  ಆದೇಶವನ್ನ ಕಾಯ್ದಿರಿಸಲಾಗಿದೆ (ರೂಲ್‌ ನಂಬರ್ 7)  ಮಾಡಲಾಗಿದೆ..

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ದೀಪನ್ ಆದೇಶ ಹೊರಡಿಸಿದ್ದಾರೆ. ಈ ಕ್ರಮದ ಬಳಿಕ ಪೊಲೀಸ್ ವಲಯದಲ್ಲೇ ಹಲವು ಪ್ರಶ್ನೆಗಳು ಕೇಳಿಬರುತ್ತಿವೆ. ರೌಡಿ ಶೀಟರ್ ಹಲ್ಲೆ ನಡೆಸಿರುವುದು ಸ್ಪಷ್ಟವಾಗಿದ್ದರೂ, ಅದರ ಪರಿಣಾಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳ ವಿರುದ್ಧವೇ ಕ್ರಮ ಕೈಗೊಳ್ಳಲಾಗಿದೆ. ರೌಡಿ ಮಾಡಿದ ತಪ್ಪಿಗೆ ಪೊಲೀಸರು ಶಿಕ್ಷೆ ಅನುಭವಿಸಬೇಕೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲೂ ಕೇಳಿಬರುತ್ತಿದೆ.

ಆದಾಗ್ಯೂ, ಪೊಲೀಸ್ ಇಲಾಖೆಯು ಈ ಕ್ರಮವನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕೈಗೊಂಡಿದ್ದು, ಇಲಾಖೆಯ ಆಂತರಿಕ ತನಿಖೆಯಲ್ಲಿ ಕಂಡುಬಂದ ಅಂಶಗಳ ಆಧಾರದ ಮೇಲೆ ಅಮಾನತು ಹಾಗೂ ವರ್ಗಾವಣೆ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ /ಮಳೆ ಏನಾಯ್ತು..? IMD ವರದಿಯಲ್ಲಿ ಆತಂಕಕಾರಿ ಮಾಹಿತಿ