ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಗೃಹಪ್ರವೇಶ ಕಾರ್ಯಕ್ರಮಕ್ಕಾಗಿ ಹಾಕಲಾಗಿದ್ದ ಪೆಂಡಾಲ್‌ನ್ನು ತೆರವುಗೊಳಿಸುವ ವೇಳೆ ವಿದ್ಯುತ್ ತಗುಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ KHB ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ಕಾರವಾರದ ಪದ್ಮನಾಭ ನಗರದ ನಿವಾಸಿ ಭರತ್ ಗೌಡ (30) ಎಂದು ಗುರುತಿಸಲಾಗಿದೆ.

ಕಾರವಾರ ನಗರದ ಕೆಎಚ್‌ಬಿ ಕಾಲೋನಿಯಲ್ಲಿ ಗೃಹಪ್ರವೇಶ ಕಾರ್ಯಕ್ರಮಕ್ಕಾಗಿ ನಿರ್ಮಿಸಲಾಗಿದ್ದ ಪೆಂಡಾಲ್‌ನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ಪೆಂಡಾಲ್‌ನ ಶೀಟ್‌ಗಳನ್ನು ತೆಗೆದುಹಾಕುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಸಂಪರ್ಕಕ್ಕೆ ಬಂದ ಪರಿಣಾಮ ಭರತ್ ಗೌಡ ಅವರಿಗೆ ತೀವ್ರ ವಿದ್ಯುತ್ ಶಾಕ್ ತಗುಲಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ದುರ್ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ/ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ