ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಬಿಡದಿ ಟೌನ್ಶಿಪ್ (Bidadi township) ಯೋಜನೆಯನ್ನು ತಕ್ಷಣವೇ ಕೈಬಿಡುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಜೆಡಿಎಸ್ (JDS) ಘಟಕವು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಶುಕ್ರವಾರ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಉತ್ತರ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ (jds president) ಸೂರಜ್ ನಾಯ್ಕ ಸೋನಿ, ಬಿಡದಿ ಭಾಗದಲ್ಲಿ ಬಹುತೇಕ ಸಣ್ಣ ಹಿಡುವಳಿ ರೈತರು ವಾಸವಾಗಿದ್ದು, ಆ ಪ್ರದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಹೈನುಗಾರಿಕೆ ನಡೆಯುತ್ತಿದೆ ಎಂದು ಹೇಳಿದರು. ಪ್ರತಿದಿನ ಸುಮಾರು ಆರು ಲಕ್ಷ ಲೀಟರ್ ಹಾಲು ಬಿಡದಿ ಭಾಗದಿಂದ ಬೆಂಗಳೂರಿಗೆ( Bengaluru) ಪೂರೈಕೆಯಾಗುತ್ತಿದೆ. ಇಂತಹ ಪ್ರದೇಶದಲ್ಲಿ ಟೌನ್ಶಿಪ್ ನಿರ್ಮಾಣ ಮಾಡಿದರೆ ರೈತರ ಜೀವನೋಪಾಯಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಬಿಡದಿ ಟೌನ್ಶಿಪ್ ಯೋಜನೆಯು ರೈತರ ಹಿತಾಸಕ್ತಿಗೆ ವಿರುದ್ಧವಾಗಿದ್ದು, ರಿಯಲ್ ಎಸ್ಟೇಟ್ (real estate ) ದಂಧೆಕೋರರಿಗೆ ಅನುಕೂಲವಾಗುವ ಯೋಜನೆಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಈ ಯೋಜನೆಯನ್ನು ಕೈಬಿಟ್ಟು ರೈತರ ಹಿತವನ್ನು ಕಾಪಾಡಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ನ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ/ಕಾರವಾರದಲ್ಲಿ ಕರ್ತವ್ಯದಲ್ಲಿದ್ದ ಬೆಳಗಾವಿ ಮೂಲದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಾವು



