ಸುದ್ದಿಬಿಂದು ಬ್ಯೂರೋ‌ ವರದಿ
ಕಾರವಾರ: ನಗರದಲ್ಲಿ ಭಾನುವಾರ ಸಂಜೆ ಸುರಿದ ಭಾರೀ ಗಾಳಿ-ಮಳೆಯಿಂದ ಹಲವು ಕಡೆ ಮರದ ಕೊಂಬೆಗಳು ಮುರಿದು ಬಿದ್ದಿದ್ದು, ಮಿಂಕ್ರಿಷ್ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಮರ ಬಿದ್ದು ಹಾನಿಯಾಗಿದ್ದು,ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಬಿರುಗಾಳಿಯೊಂದಿಗೆ ಸುರಿದ ಮಳೆಯಿಂದ ಮರದ ದೊಡ್ಡ ಕೊಂಬೆಯೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನ ಮುಂಭಾಗ ಹಾಗೂ ಮೇಲ್ಭಾಗ ಜಖಂಗೊಂಡಿದೆ. ಘಟನೆ ಸಂಭವಿಸಿದ ವೇಳೆ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರವನ್ನು ತೆರವುಗೊಳಿಸಿ ಉಳಿದ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಭಾರೀ ಗಾಳಿ-ಮಳೆಯ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಮರದ ಕೊಂಬೆಗಳು ಮುರಿದು ಬೀಳುತ್ತಿರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. .

ಇದನ್ನೂ ಓದಿ/ ಅಪ್ರಾಪ್ತೆಗೆ ಕಿರುಕುಳ ಆರೋಪ: ಪಿಎಸ್‌ಐ ಬಂಧನ