ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ: ಕೆಲ ದಿನಗಳ ಹಿಂದೆ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ನಡೆದಿದ್ದ ಚಿಪ್ಪಿಕಲ್ಲು ದುರಂತದಲ್ಲಿ ತಾಯಿಯನ್ನು ಕಳೆದುಕೊಂಡಿದ್ದ ಮಗ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಮೃತರನ್ನು ಭಟ್ಕಳ ತಾಲೂಕಿನ ಬೆಂಗ್ರೆ ಸಮೀಪದ ಮೋಳಿನಮನೆಯ ನಿವಾಸಿ ಆನಂದ ಅಣ್ಣಪ್ಪ ನಾಯ್ಕ (36) ಎಂದು ಗುರುತಿಸಲಾಗಿದೆ. ಶಿರಾಲಿ ಸಮೀಪ ನಡೆದಿದ್ದ ಚಿಪ್ಪಿಕಲ್ಲು ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, ಆ ದುರ್ಘಟನೆಯಲ್ಲಿ ಆನಂದ ಅವರ ತಾಯಿ ಲಕ್ಷಿ ನಾಯ್ಕ ಕೂಡ ಸಾವನ್ನಪ್ಪಿದ್ದರು. ತಾಯಿಯ ನಿಧನದ ಬಳಿಕ ಆನಂದ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದು, ಅವರ ಆರೋಗ್ಯ ಮತ್ತು ವರ್ತನೆಯಲ್ಲಿ ಬದಲಾವಣೆ ಕಂಡುಬಂದಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ.

ಎಂ.ಕಾಂ ಪದವೀಧರರಾಗಿದ್ದ ಆನಂದಗೆ ಉದ್ಯೋಗ ದೊರೆಯದಿರುವುದು ಕೂಡ ಮಾನಸಿಕ ಒತ್ತಡಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಈತ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ/ಆರತಿಬೈಲ್ ಬಳಿ ಅಪಘಾತ : ರೂಪಾಲಿ. ನಾಯ್ಕ ಸಂತಾಪ