ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಬಸವರಾಜ್ (48), ಅಭಿಷೇಕ್ ಈಶ್ವರ್ (28) ಅಕ್ಷಯ (26), ಅಭಿಷೇಕ್ (26), ಸಂಜೀವ/ ಸಂಜಯ ಅಂಗಡಿ(33) ( ಚಾಲಕ ) ಎಂಬುವವರು ಸ್ಥಳದಲ್ಲೇ ಮೃತಪಟ್ಟವರಾಗಿದ್ದಾರೆ. ಇನ್ನೂ ಶಿವರಾಜ್ ದುರ್ಗಪ್ಪ ಮಡಿವಾಳ್ (22), ಮಂಜುನಾಥ್ ಅಶೋಕ್ ಚುಲಕಿ (32), ಸಚಿನ ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ (28) ಎಂಬುವವರು ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ. ಇವರೆಲ್ಲರೂ ಸ್ನೇಹಿತರಾಗಿದ್ದಾರೆ.
ಇವರೆಲ್ಲರೂ ಸ್ನೇಹಿತರಾಗಿದ್ದು ಪ್ರವಾಸಕ್ಕೆಂದು ರಾತ್ರಿ ಬಳಿಕ ಧಾರವಾಡದಿಂದ ಪ್ರಯಾಣಿಸಿದ್ದರು, ಇವರು ಗೋಕರ್ಣ, ಮುರುಡೇಶ್ವರ, ಸೇರಿದಂತೆ ಉತ್ತರಕನ್ನಡ ಪ್ರವಾಸ ಮುಗಿಸಿ ಅಲ್ಲಿಂದ ಧರ್ಮಸ್ಥಳ ಹಾಗೂ ಚಿಕ್ಕಮಗಳೂರು ಪ್ರವಾಸ ಕೈಗೊಂಡಿದ್ದರು, ಇವರೆಲ್ಲರೂ ಸುಗ್ಗಿ ಜೋಮುಟೊ ಎಂಪ್ಲಾಯಿಸ್ ಆಗಿ ಕೆಲಸಮಾಡುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಅಂಕೋಲಾ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿಯೊಂದಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.. ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ಮೂವರನ್ನ ತಕ್ಷಣ ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..



