ಸುದ್ದಿಬಿಂದು ಬ್ಯೂರೋ ವರದಿ

ಕಾರವಾರ : ಸದಾಶಿವಗಡ ಸಮೀಪ ಕಳೆದ ವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಸದಾಶಿವಗಡದ ನಿವಾಸಿ ಶುಭಂ ರಾಣೆ (32) ಮೃತ ಯುವಕ ಎಂದು ತಿಳಿದುಬಂದಿದೆ.

ಜುಲೈ 3ರಂದು ಸಂಜೆ ದುರ್ಗಾದೇವಿ ದೇವಸ್ಥಾನದ ಸಮೀಪದ ತಾರಿವಾಡಾ ರಸ್ತೆಯಲ್ಲಿ ಈ ಅಪಘಾತ ನಡೆದಿತ್ತು. ಶುಭಂ ಬುಲೆಟ್‌ ಮೋಟಾರ್‌ಸೈಕಲ್‌ನಲ್ಲಿ ಲಿಂಕ್‌ ರಸ್ತೆಯಿಂದ ತಾರಿವಾಡಾ ಕಡೆಗೆ ತೆರಳುತ್ತಿದ್ದ ವೇಳೆ ಬೈಕ್‌ನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್‌ ಗೋಡೆಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಅವರು ಬೈಕ್‌ನೊಂದಿಗೆ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗಳಾಗಿದ್ದವು.

ಅಪಘಾತದ ಬಳಿಕ ಸ್ಥಳೀಯರು ತಕ್ಷಣವೇ ಅವರನ್ನು ಕಾರವಾರದ ಕ್ರಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗೆ ಗೋವಾದ ಪಣಜಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಯುವಕನ ಅಕಾಲಿಕ ನಿಧನದಿಂದ ಸದಾಶಿವಗಡ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಪ್ರಕರಣ ಸಂಬಂಧ ಚಿತ್ತಾಕುಲ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ / ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಯುವಜನತೆ ತಪ್ಪದೇ ಮತದಾನ ಮಾಡಿ : ಡಾ.ದಿಲೀಷ್ ಶಶಿ