ಸುದ್ದಿಬಿಂದು ಬ್ಯೂರೋ ವರದಿ

ಅಂಕೋಲಾ :  ಸುಮಾರು 14 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಅಪಘಾತ ಪ್ರಕರಣದ ಆರೋಪಿಯನ್ನು ಅಂಕೋಲಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

2012ರ ನವೆಂಬರ್ 28ರಂದು ರಫಿಕ್ ಅಹ್ಮದ್ ತಂದೆ ಮೆಹಬೂಬ ಸುಬಾನಿ ಕಮಟಗಿ, ಮೂಲತಃ ತೋಟದಗಲ್ಲಿ, ಬೈಲಹೊಂಗಲ (ಬೆಳಗಾವಿ ಜಿಲ್ಲೆ) ನಿವಾಸಿಯಾಗಿದ್ದು ಈತ ತಾನು ಚಲಾಯಿಸುತ್ತಿದ್ದ ಲಾರಿಯನ್ನು ಅಂಕೋಲಾದಿಂದ ಯಲ್ಲಾಪುರದ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಅಂಕೋಲಾ ತಾಲೂಕಿನ ಸುಂಕಸಾಳ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ  ನಿಯಂತ್ರಣ ತಪ್ಪಿ, ಎದುರು ದಿಕ್ಕಿನಿಂದ ಬರುತ್ತಿದ್ದ  ಸ್ಕಾರ್ಪಿಯೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದನು.

ಅಪಘಾತದ ಪರಿಣಾಮ ಸ್ಕಾರ್ಪಿಯೋ ಚಾಲಕರಾದ ಲೋಪಸೂನ್ ಪ್ರೋಟಿನ್ ಡಾರಗೋಳ (73) ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ವಾಹನದಲ್ಲಿದ್ದ ಟೆನನ್ ಯೋನವೆನ್ (18) ಹಾಗೂ ತೂಟೆನ್ ಪ್ಲೇರಿಂಗ (70) ಅವರಿಗೆ ಗಾಯಗಳಾಗಿದ್ದವು.

ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಂಡ ಬಳಿಕ ನ್ಯಾಯಾಗದೆ ತಲೆಮರೆಸಿಕೊಂಡಿದ್ದ. ತನ್ನ ಖಾಯಂ ವಿಳಾಸದಲ್ಲಿಯೂ ವಾಸಿಸದೆ ನಾಪತ್ತೆಯಾಗಿದ್ದರಿಂದ ಆತನ ವಿರುದ್ಧ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿತ್ತು.

ಆರೋಪಿಯ ಪತ್ತೆಗಾಗಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ, ಆರೋಪಿ ಜುಲೈ 10 ರಂದು ಹುಬ್ಬಳ್ಳಿಯಿಂದ ಕೇರಳದ ಕಡೆಗೆ ಲಾರಿ ಚಾಲಕನಾಗಿ ತೆರಳುತ್ತಿದ್ದಾಗ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಪೊಲೀಸರು ವಶಕ್ಕೆ ಪಡೆದು ಬಂಧಿಸಿದರು. ಬಳಿಕ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ, ಅಂಕೋಲಾ ಎದುರು ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನಂತರ ಜಿಲ್ಲಾ ಕಾರಾಗೃಹ, ಕಾರವಾರಕ್ಕೆ ಕಳುಹಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಹಾಗೂ ಕಾರವಾರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಗಿರೀಶ ಎಸ್.ವಿ. ಅವರ ಮಾರ್ಗದರ್ಶನದಲ್ಲಿ, ಅಂಕೋಲಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಚಂದ್ರಶೇಖರ ಮಠಪತಿ ಅವರ ನೇತೃತ್ವದಲ್ಲಿ ನಡೆಸಲಾಯಿತು. ತನಿಖಾ ತಂಡದಲ್ಲಿ ಪಿಎಸ್‌ಐ  ಸುನೀಲ ಹುಲ್ಲೋಳ್ಳಿ, ಎಎಸ್‌ಐ ದೇವಿದಾಸ ಚಾಪೋಲೇಕರ, ಸಿಬ್ಬಂದಿಗಳಾದ ಮೋಹನ ಗೌಡ,  ಮಹಾದೇವ ಸಿದ್ದಿ, ರಮೇಶ್ ತುಂಗಳ,  ರಯೀಸ್ ಬಾಗವಾನ ಹಾಗೂ  ಉಮೇಶ್ ಗಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿ ಪ್ರಶಂಸಿಸಿದ್ದಾರೆ.

ಇದನ್ನೂ ಓದಿ / “ಗಾನಕೋಗಿಲೆಯ ಕೊನೆಯ ಗಾನ… 48 ಸಾವಿರ ಹಾಡುಗಳ ಅಮರ ಧ್ವನಿ ಎಸ್. ಜಾನಕಿ ಇನ್ನಿಲ್ಲ”ಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿದ್ದು, ಪ್ರಕರಣವು ವಿಚಾರಣೆಯಲ್ಲಿತ್ತು. ಆದರೆ ಆರೋಪಿ 2013ರಿಂದ ನ್ಯಾಯಾಲಯಕ್ಕೆ ಹಾಜರಾ