ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಎಸ್ಐಆರ್ (Special Intensive Revision) ಪ್ರಕ್ರಿಯೆಯನ್ನು ಹಾದಿತಪ್ಪಿಸುವ ಪ್ರಯತ್ನವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಕುಮಟಾ ಬಿಜೆಪಿ ಶಾಸಕ ದಿನಕರ ಶೆಟ್ಟಿ ಆರೋಪಿಸಿದರು.
ಕಾರವಾರದ ಪತ್ರಿಕಾಭವನದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ವಲಸಿಗರಿಗೆ ಕಂದಾಯ ಇಲಾಖೆಯ ಮೂಲಕ ವಾಸಸ್ಥಳ ಪ್ರಮಾಣಪತ್ರಗಳನ್ನು ನೀಡುವ ಹುನ್ನಾರ ನಡೆಯುತ್ತಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು. ಮುಂದಿನ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಕಾಂಗ್ರೆಸ್ ಈ ರೀತಿಯ ಕ್ರಮಗಳಿಗೆ ಮುಂದಾಗಿದೆ ಎಂದು ಆರೋಪಿಸಿದರು.
ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿರುವ ಮುಸ್ಲಿಮರನ್ನು ಮತದಾರರ ಪಟ್ಟಿಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.ಸಾಮಾನ್ಯವಾಗಿ ಮುಸ್ಲಿಂ ಸಮುದಾಯದ ಮತಗಳು ಕಾಂಗ್ರೆಸ್ಗೆ ಸಿಗುತ್ತವೆ ಎಂಬ ಕಾರಣಕ್ಕೆ ಇಂತಹ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದರು. ಕರ್ನಾಟಕದಲ್ಲಿ ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿರುವ ಅನೇಕ ಮುಸ್ಲಿಮರಿದ್ದು, ಅವರಿಗೆ ರಾಜ್ಯದಲ್ಲಿ ಮತದಾನದ ಹಕ್ಕು ನೀಡಬಾರದು ಎಂದು ಆಗ್ರಹಿಸಿದರು. ಶೀಘ್ರದಲ್ಲಿ ರಾಜ್ಯಪಾಲರಿಗೆ ಶೀಘ್ರದಲ್ಲೇ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು.
ಇದನ್ನೂ ಓದಿ /”RSS ಚರ್ಚೆ ಬಿಟ್ಟು ಕಲಬುರುಗಿ ಶಿಕ್ಷಣದತ್ತ ಗಮನ ಹರಿಸಿ: ಖರ್ಗೆಗೆ ಯಶ್ಪಾಲ್ ಸುವರ್ಣ ಸಲಹೆ”

