ಸುದ್ದಿಬಿಂದು ಬ್ಯೂರೋ ವರದಿ

ಕಾರವಾರ : ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರು RSS ಕುರಿತು ಟೀಕೆ ಮಾಡುವುದಕ್ಕಿಂತ ತಮ್ಮ ಜಿಲ್ಲೆ ಕಲಬುರುಗಿಯ ಶಿಕ್ಷಣ ಕ್ಷೇತ್ರದ ಸಾಧನೆ ಹಾಗೂ ಶೈಕ್ಷಣಿಕ ಫಲಿತಾಂಶದ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಿಯಾಂಕ ಖರ್ಗೆ ಅವರು ಒಂದು ವಾರ ಕಲ್ಲಡ್ಕ ಪ್ರಭಾಕರ ಭಟ್ ಅವರ ಬಳಿ ಶಿಕ್ಷಣದ ಬಗ್ಗೆ ತಿಳಿದುಕೊಂಡರೆ, ಅವರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಲು ಸಹಕಾರಿಯಾಗಬಹುದು. ಉಡುಪಿ ಜಿಲ್ಲೆಯಂತೆ ಕಲಬುರುಗಿ ಜಿಲ್ಲೆಯೂ ಶೈಕ್ಷಣಿಕ ಸಾಧನೆ ಮಾಡುವ ಅವಕಾಶವಿದೆ” ಎಂದು ಅಭಿಪ್ರಾಯಪಟ್ಟರು. “ಫಲಿತಾಂಶ ಮತ್ತು ಶಿಕ್ಷಣದ ಗುಣಮಟ್ಟದ ಬಗ್ಗೆ ಚರ್ಚೆ ನಡೆಸಬೇಕಾದವರು ಆರ್‌ಎಸ್‌ಎಸ್ ಬಗ್ಗೆ ಮಾತನಾಡುತ್ತಿದ್ದಾರೆ. ಜನಪ್ರತಿನಿಧಿಗಳಾಗಿ ತಮ್ಮ ಕ್ಷೇತ್ರದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ಹೇಳಿದರು.

“ಖರ್ಗೆ ಅವರು ತಮ್ಮ ಜಿಲ್ಲೆಯ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸ್ಥಿತಿಗತಿಗಳನ್ನು ಮೊದಲು ಅರಿತುಕೊಂಡು ಬಳಿಕ ಈ ರೀತಿಯ ಹೇಳಿಕೆಗಳನ್ನು ನೀಡಬೇಕು” ಎಂದು ಯಶ್ಪಾಲ್ ಸುವರ್ಣ ತಿಳಿಸಿದರು.