ಸುದ್ದಿಬಿಂದು ಬ್ಯೂರೋ ವರದಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗುತ್ತಿರುವ ಬರ ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ರಾಜ್ಯದ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ತಕ್ಷಣ ಕೇಂದ್ರ ಅಧ್ಯಯನ ತಂಡವನ್ನು ನಿಯೋಜಿಸುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಪರಿಣಾಮ ಕೃಷಿ ಚಟುವಟಿಕೆಗಳ ಮೇಲೆ ತೀವ್ರ ಪರಿಣಾಮ ಬೀರಿದ್ದು, ಮುಂಗಾರು ಬಿತ್ತನೆ ಕಾರ್ಯ ವಿಳಂಬವಾಗಿದೆ. ಅಲ್ಲದೆ, ಪ್ರಮುಖ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಮಟ್ಟ ಕುಸಿದಿದ್ದು, ಕೃಷಿ ಹಾಗೂ ಕುಡಿಯುವ ನೀರಿನ ಭದ್ರತೆಯ ಮೇಲೂ ಆತಂಕ ಎದುರಾಗಿದೆ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬರ ಪರಿಸ್ಥಿತಿಯ ತೀವ್ರತೆಯನ್ನು ಸ್ಥಳದಲ್ಲೇ ಪರಿಶೀಲಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದ ಅಧ್ಯಯನ ತಂಡವನ್ನು ಶೀಘ್ರವಾಗಿ ರಾಜ್ಯಕ್ಕೆ ಕಳುಹಿಸಬೇಕು. ಜೊತೆಗೆ, ಬರ ನಿರ್ವಹಣೆಗಾಗಿ ರಾಜ್ಯಕ್ಕೆ ತುರ್ತು ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಅವರು ಮನವಿ ಮಾಡಿದ್ದಾರೆ.

ರೈತರ ಹಿತ ರಕ್ಷಣೆ, ಜಲಮೂಲಗಳ ಸಂರಕ್ಷಣೆ ಹಾಗೂ ಸಾರ್ವಜನಿಕರ ಸಂಕಷ್ಟ ನಿವಾರಣೆಗೆ ಕರ್ನಾಟಕ ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಬದ್ಧವಾಗಿದ್ದು, ಕೇಂದ್ರದ ಸಹಕಾರದ ನಿರೀಕ್ಷೆಯಲ್ಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ/ “ಶಿರಸಿ–ಮುಂಡಗೋಡ-ಸೌವದತ್ತಿ ನೂತನ ಬಸ್ ಸೇವೆಗೆ ಶಾಸಕ ಶಿವರಾಮ ಹೆಬ್ಬಾರ್ ಚಾಲನೆ