ಸುದ್ದಿಬಿಂದು ಬ್ಯೂರೋ ವರದಿ
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕರಗಿನಕೊಪ್ಪ ಗ್ರಾಮದ ಮುರಾರ್ಜಿ ದೇಸಾಯಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ವಿದ್ಯಾರ್ಥಿಯೊಬ್ಬನ ಪೋಷಕ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಈ ದೃಶ್ಯಗಳು ಕಾಲೇಜಿನ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
12 ರವಿವಾರದಂದು ರಾತ್ರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಪೋಷಕ ಶಿವಾನಂದ ಹಾರೋಹಳ್ಳಿ ಅವರು ಕಾಲೇಜಿಗೆ ಆಗಮಿಸಿ, ತಮ್ಮ ಮಗನ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ವೇಳೆ ಹಲ್ಲೆ ತಡೆಯಲು ಮುಂದಾದ ಇತರೆ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯಿಂದ ಕಾಲೇಜಿನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಘಟನೆ ಸಂಬಂಧ ಕಾಲೇಜಿನ ಪ್ರಾಂಶುಪಾಲರು ಮುಂಡಗೋಡ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೋಷಕ ಶಿವಾನಂದ ಹಾರೋಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣದ ಕುರಿತು ಮುಂಡಗೋಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಹಲ್ಲೆಯ ಸಂಪೂರ್ಣ ದೃಶ್ಯಗಳು ಕಾಲೇಜಿನ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ತನಿಖೆಗೆ ಮಹತ್ವದ ಸಾಕ್ಷಿಯಾಗಿ ಪರಿಗಣಿಸಲಾಗಿದೆ.
ಇದನ್ನೂ ಓದಿ/ಸಾಲಬಾಧೆಗೆ ರೈತ ಆತ್ಮಹತ್ಯೆ : ಗದ್ದೆಯಲ್ಲೇ ವಿಷ ಸೇವಿಸಿ ಜೀವ ಅಂತ್ಯ

