ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ–ಶಿರಸಿ ಸಂಪರ್ಕಿಸುವ ದೇವಿಮನೆ ಘಟ್ಟದಲ್ಲಿ ಇಂದು ಸುರಿದ ಭಾರಿ ಮಳೆಯ ಪರಿಣಾಮವಾಗಿ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡಕುಸಿತ ಉಂಟಾಗುವ ಕ್ಷಣದಲ್ಲಿ ಬೈಕ್ ಸವಾರನೋರ್ವ ಇದೆ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದು, ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆ ನಡೆದಿದೆ.
ಘಟನೆ ನಡೆದ ವೇಳೆ ಬೈಕ್ನಲ್ಲಿ ಸಾಗುತ್ತಿದ್ದ ಸವಾರನ ಮೇಲೆ ಏಕಾಏಕಿ ಮರ ಬಿದ್ದಿದೆ. ಆದರೆ ಸವಾರ ಸಮಯಪ್ರಜ್ಞೆಯಿಂದ ತಪ್ಪಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೈಕ್ಗೆ ಮಾತ್ರ ಹಾನಿ ಆಗಿದೆ ಎನ್ನಲಾಗಿದೆ. ಹೆದ್ದಾರಿಯಲ್ಲಿ ಗುಡ್ಡಕುಸಿತ ಉಂಟಾಗಿರುವ ಕಾರಣ ಕೆಲ ಕಾಲ ಹೆದ್ದಾರಿಯಲ್ಲಿ ಉಳಿದ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿತ್ತು.
ಗುಡ್ಡುಕುಸಿತ ಉಂಟಾದ ಸುದ್ದಿ ತಿಳಿಯುತ್ತಿದ್ದಂತೆ ಕುಮಟಾ ತಹಶೀಲ್ದಾರ ಕೃಷ್ಣ ಕಾಮಕರ್ ಅವರು ಹೆದ್ದಾರಿ ಗುತ್ತಿಗೆ ಪಡೆದ ಕಂಪನಿಯ ಅಧಿಕಾರಿಗಳ ಜೊತೆ ಮಾತನಾಡಿ ಹೆದ್ದಾರಿಯಲ್ಲಿ ಬಿದ್ದಿರುವ ಮಣ್ಣುಗಳನ್ನ ತೆರವು ಮಾಡುವಂತೆ ಸೂಚನೆ ನೀಡಿದ ಬೆನ್ನಲ್ಲೆ ಇದೀಗ ಹೆದ್ದಾರಿಯಲ್ಲಿ ಬಿದ್ದಿ ಮಣ್ಣುಗಳನ್ನ ತೆರವು ಮಾಡುವ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ನಿರಂತರ ಮಳೆಯ ಹಿನ್ನೆಲೆಯಲ್ಲಿ ಭೂಕುಸಿತದ ಆತಂಕ ಮುಂದುವರಿದಿರುವುದರಿಂದ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸಂಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದನ್ನೂ ಓದಿ/ಮೆಹೆಂದಿ ರಂಗು ಮಾಸುವ ಮುನ್ನವೇ ವಿಧಿಯ ಕ್ರೂರ ಆಟ: ಬೈಕ್ ಸ್ಕಿಡ್ ನವವಧು ಸ್ಥಳದಲ್ಲೇ ಸಾವು, ಪತಿ ಗಂಭೀರ..!



