ಸುದ್ದಿಬಿಂದು ಬ್ಯೂರೋ ವರದಿ
ರಾಮನಗರ/ಲೋಂಡಾ: ಮದ್ಯದ ಅಮಲಿನಲ್ಲಿ ಅಡ್ಡಾದಿಡ್ಡಿಯಾಗಿ ಕಾರ ಚಾಲನೆ ಮಾಡುತ್ತಿದ್ದ ಚಾಲಕ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಬೆಳಗಾವಿ–ಗೋವಾ ರಾಷ್ಟ್ರೀಯ ಹೆದ್ದಾರಿಯ ಅಸ್ತುಲಿ ಸಮೀಪ ನಡೆದಿದೆ.
ಘಟನೆಯಲ್ಲಿ ಎರಡು ಕಾರುಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಕೇರಳದಿಂದ ಗೋವಾ ಮಾರ್ಗವಾಗಿ ಬೆಂಗಳೂರಿನತ್ತ ತೆರಳುತ್ತಿದ್ದ ಕಾರ ಚಾಲಕ ಮದ್ಯದ ಅಮಲಿನಲ್ಲೇ ವಾಹನ ಚಲಾಯಿಸುತ್ತಿದ್ದನೆಂದು ತಿಳಿದುಬಂದಿದೆ.ಅಸ್ತುಲಿ ಸಮೀಪ ಲಾರಿಗೆ ಡಿಕ್ಕಿ ಹೊಡೆದ ಕಾರು, ಬಳಿಕ ಬೆಂಗಳೂರಿನಿಂದ ಗೋವಾಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ನಂತರವೂ ಚಾಲಕ ಕಾರಿನಲ್ಲೇ ಕುಳಿತಿದ್ದು. ಆತನ ಪಕ್ಕದಲ್ಲಿ ಮದ್ಯದ ಗ್ಲಾಸ್ ಹಾಗೂ ಬಾಟಲ ಸಹ ಪತ್ತೆಯಾಗಿದೆ. ಆತ ಸಹ ತಾನು ಮದ್ಯ ಸೇವಿಸಿ ವಾಹನ ಚಲಾಯಿಸಿರುವುದನ್ನು ಒಪ್ಪಿಕೊಂಡಿದ್ದಾನೆ. ತನ್ನ ತಪ್ಪಿನಿಂದಲೇ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಮನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಲೊಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

